ತ್ಯಾಜ್ಯ ತೆರವಿಗೆ ಮುಂದಾದ ನಂಜನಗೂಡು ನಗರಸಭಾ ಅಧಿಕಾರಿಗಳು…Tv10 ಕನ್ನಡ ಸುದ್ದಿ ಇಂಪ್ಯಾಕ್ಟ್…

ನಂಜನಗೂಡು,ಜು22,Tv10 ಕನ್ನಡ
Tv10 ಕನ್ನಡ ವಾಹಿನಿ ಸುದ್ದಿಗೆ ನಂಜನಗೂಡು ನಗರಸಭಾ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಕಪಿಲೆ ಒಡಲನ್ನ ಸೇರುತ್ತಿರುವ ತ್ಯಾಜ್ಯ ತೆರುವುಗೊಳಿಸಲು ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.ಇದು Tv10 ಕನ್ನಡ ವರದಿ ಫಲಶೃತಿ

ಹುಲ್ಲಹಳ್ಳಿ ರಾಂಪುರ ನಾಲೆ ಬರಿದಾಗಿದೆ ಇಲ್ಲಿಂದ ಶ್ರೀಕಂಠೇಶ್ವರನ ದೇವಸ್ಥಾನದ ಸಮೀಪದಲ್ಲಿ ಹರಿಯುವ ಗುಂಡ್ಲಾ ನದಿಗೆ ಸಂಪರ್ಕ ಪಡೆದು ಕಪಿಲಾ ನದಿಗೆ ನೀರು ಸೇರುತ್ತದೆ.ನಾಲೆಯಲ್ಲಿ ನೀರಿಲ್ಲದ ಕಾರಣ ತ್ಯಾಜ್ಯ ತುಂಬಿಹೋಗಿದೆ.ಇಲ್ಲಿಂದ ಹರಿಯುವ ಒಳಚರಂಡಿ ನೀರು ತುಂಬಿ ಕಪಿಲಾ ನದಿಯ ಒಡಲು ಸೇರುತ್ತಿದೆ.ಪಾಪ ಕಳೆಯಲು ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಉಚಿತ ಖಾಯಿಲೆ ಹರಡುತ್ತಿರುವ ಬಗ್ಗೆ ಇಂದು Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಕೂಡಲೇ ಎಚ್ಚೆತ್ತ ನಗರಸಭಾ ಅಧಿಕಾರಿಗಳು ತ್ಯಾಜ್ಯ ತೆರುವಿಗೆ ಮುಂದಾಗಿದ್ದಾರೆ.ಇಂದು ಸರ್ಕಾರಿ ರಜೆ ಇದ್ದರೂ ಮೈಕೊಡವಿ ನಿಂತ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗಿದ್ದಾರೆ.ಇದು Tv10 ಇಂಪ್ಯಾಕ್ಟ್…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *