Tv10 ಕನ್ನಡ ವರದಿ ಎಫೆಕ್ಟ್…ನಗರಸಭಾ ಕಚೇರಿ ಕುರ್ಚಿಗಳು ಬದಲು…ಗೊಬ್ಬೆದ್ದು ನಾರುತ್ತಿದ್ದ ಚೇರ್ ಗಳಿಗೆ ಮುಕ್ತಿ…

ನಂಜನಗೂಡು,ಜು23,Tv10 ಕನ್ನಡ
ಕೊನೆಗೂ ನಂಜನಗೂಡು ನಗರಸಭಾ ಕಚೇರಿ ಅಧಿಕಾರಿಗಳು ಮೈ ಕೊಡವಿ ಎದ್ದುನಿಂತಿದ್ದಾರೆ.ಗೊಬ್ಬೆದ್ದು ನಾರುತ್ತಿದ್ದ ಕಚೇರಿ ಕುರ್ಚಿಗಳಿಗೆ ಮುಕ್ತಿ ನೀಡಿದ್ದಾರೆ.ರಾತ್ರೋ ರಾತ್ರಿ ಹೊಸ ಕುರ್ಚಿಗಳನ್ನ ಅಳವಡಿಸಲಾಗಿದೆ.ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮುಜುಗರವಾಗುತ್ತಿದ್ದ ಚೇರ್ ಗಳ ಬದಲು ಹೊಸ ಕುರ್ಚಿಗಳನ್ನ ಹಾಕಲಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿ.

ನಂಜನಗೂಡು ನಗರಸಭಾ ಕಚೇರಿಯಲ್ಲಿ ಅಳವಡಿಸಲಾಗಿದ್ದ ಸಾರ್ವಜನಿಕರ ಬಳಕೆಯ ಆಸನಗಳು ಗೊಬ್ಬೆದ್ದು ನಾರುತ್ತಿದ್ದವು. ಕುರ್ಚಿಯಲ್ಲಿ ಕುಳಿತುಕೊಳ್ಳಲು ಅಸಹ್ಯಪಡುತ್ತಿದ್ದರು.ಪ್ರತಿವರ್ಷ ಪೀಠೋಪಕರಣಗಳ ಬದಲಾವಣೆಗಾಗಿ ಆಯವ್ಯಯದಲ್ಲಿ ಲಕ್ಷಾಂತರ ರೂ ಮೀಸಲಿಟ್ಟರೂ ಕುರ್ಚಿಗಳು ಮಾತ್ರ ಬದಲಾಗಿರಲಿಲ್ಲ.ನೂತನ ಶಾಸಕ ದರ್ಶನ್ ಧೃವನಾರಾಯಣ್ ಸಹ ಕುರ್ಚಿಗಳನ್ನ ಬದಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ತಲೆ ಕೆಡಿಸಿಕೊಂಡಿರಲಿಲ್ಲ.ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ Tv10 ಕನ್ನಡ ಎರಡು ದಿನಗಳ ಹಿಂದೆ ವರದಿ ಮಾಡಿತ್ತು.ವರದಿಗೆ ಎಚ್ಚೆತ್ತ ನಗರಸಭಾ ಆಯುಕ್ತ ನಂಜುಂಡಸ್ವಾಮಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶ್ರೀನಿವಾಸ ರವರು ರಾತ್ರೋ ರಾತ್ರಿ ಕುರ್ಚಿಗಳನ್ನ ಬದಲಿಸಿದ್ದಾರೆ.ಶಾಸಕ ದರ್ಶನ್ ಧೃವನಾರಾಯಣ್ ಹಾಗೂ ಜಿಲ್ಲಾಧಿಕಾರಿ ರಾಜೇಂದ್ರ ರವರ ಖಡಕ್ ಸೂಚನೆಗೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ ಇದು Tv10 ಕನ್ನಡ ವರದಿ ಇಂಪ್ಯಾಕ್ಟ್…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *