Tv10 ಕನ್ನಡ ವರದಿ ಎಫೆಕ್ಟ್…ನಗರಸಭಾ ಕಚೇರಿ ಕುರ್ಚಿಗಳು ಬದಲು…ಗೊಬ್ಬೆದ್ದು ನಾರುತ್ತಿದ್ದ ಚೇರ್ ಗಳಿಗೆ ಮುಕ್ತಿ…

ನಂಜನಗೂಡು,ಜು23,Tv10 ಕನ್ನಡ
ಕೊನೆಗೂ ನಂಜನಗೂಡು ನಗರಸಭಾ ಕಚೇರಿ ಅಧಿಕಾರಿಗಳು ಮೈ ಕೊಡವಿ ಎದ್ದುನಿಂತಿದ್ದಾರೆ.ಗೊಬ್ಬೆದ್ದು ನಾರುತ್ತಿದ್ದ ಕಚೇರಿ ಕುರ್ಚಿಗಳಿಗೆ ಮುಕ್ತಿ ನೀಡಿದ್ದಾರೆ.ರಾತ್ರೋ ರಾತ್ರಿ ಹೊಸ ಕುರ್ಚಿಗಳನ್ನ ಅಳವಡಿಸಲಾಗಿದೆ.ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮುಜುಗರವಾಗುತ್ತಿದ್ದ ಚೇರ್ ಗಳ ಬದಲು ಹೊಸ ಕುರ್ಚಿಗಳನ್ನ ಹಾಕಲಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿ.

ನಂಜನಗೂಡು ನಗರಸಭಾ ಕಚೇರಿಯಲ್ಲಿ ಅಳವಡಿಸಲಾಗಿದ್ದ ಸಾರ್ವಜನಿಕರ ಬಳಕೆಯ ಆಸನಗಳು ಗೊಬ್ಬೆದ್ದು ನಾರುತ್ತಿದ್ದವು. ಕುರ್ಚಿಯಲ್ಲಿ ಕುಳಿತುಕೊಳ್ಳಲು ಅಸಹ್ಯಪಡುತ್ತಿದ್ದರು.ಪ್ರತಿವರ್ಷ ಪೀಠೋಪಕರಣಗಳ ಬದಲಾವಣೆಗಾಗಿ ಆಯವ್ಯಯದಲ್ಲಿ ಲಕ್ಷಾಂತರ ರೂ ಮೀಸಲಿಟ್ಟರೂ ಕುರ್ಚಿಗಳು ಮಾತ್ರ ಬದಲಾಗಿರಲಿಲ್ಲ.ನೂತನ ಶಾಸಕ ದರ್ಶನ್ ಧೃವನಾರಾಯಣ್ ಸಹ ಕುರ್ಚಿಗಳನ್ನ ಬದಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ತಲೆ ಕೆಡಿಸಿಕೊಂಡಿರಲಿಲ್ಲ.ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ Tv10 ಕನ್ನಡ ಎರಡು ದಿನಗಳ ಹಿಂದೆ ವರದಿ ಮಾಡಿತ್ತು.ವರದಿಗೆ ಎಚ್ಚೆತ್ತ ನಗರಸಭಾ ಆಯುಕ್ತ ನಂಜುಂಡಸ್ವಾಮಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶ್ರೀನಿವಾಸ ರವರು ರಾತ್ರೋ ರಾತ್ರಿ ಕುರ್ಚಿಗಳನ್ನ ಬದಲಿಸಿದ್ದಾರೆ.ಶಾಸಕ ದರ್ಶನ್ ಧೃವನಾರಾಯಣ್ ಹಾಗೂ ಜಿಲ್ಲಾಧಿಕಾರಿ ರಾಜೇಂದ್ರ ರವರ ಖಡಕ್ ಸೂಚನೆಗೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ ಇದು Tv10 ಕನ್ನಡ ವರದಿ ಇಂಪ್ಯಾಕ್ಟ್…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *