Tv10 ಕನ್ನಡ ವರದಿ ಎಫೆಕ್ಟ್…ನಗರಸಭಾ ಕಚೇರಿ ಕುರ್ಚಿಗಳು ಬದಲು…ಗೊಬ್ಬೆದ್ದು ನಾರುತ್ತಿದ್ದ ಚೇರ್ ಗಳಿಗೆ ಮುಕ್ತಿ…

ನಂಜನಗೂಡು,ಜು23,Tv10 ಕನ್ನಡ
ಕೊನೆಗೂ ನಂಜನಗೂಡು ನಗರಸಭಾ ಕಚೇರಿ ಅಧಿಕಾರಿಗಳು ಮೈ ಕೊಡವಿ ಎದ್ದುನಿಂತಿದ್ದಾರೆ.ಗೊಬ್ಬೆದ್ದು ನಾರುತ್ತಿದ್ದ ಕಚೇರಿ ಕುರ್ಚಿಗಳಿಗೆ ಮುಕ್ತಿ ನೀಡಿದ್ದಾರೆ.ರಾತ್ರೋ ರಾತ್ರಿ ಹೊಸ ಕುರ್ಚಿಗಳನ್ನ ಅಳವಡಿಸಲಾಗಿದೆ.ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮುಜುಗರವಾಗುತ್ತಿದ್ದ ಚೇರ್ ಗಳ ಬದಲು ಹೊಸ ಕುರ್ಚಿಗಳನ್ನ ಹಾಕಲಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿ.

ನಂಜನಗೂಡು ನಗರಸಭಾ ಕಚೇರಿಯಲ್ಲಿ ಅಳವಡಿಸಲಾಗಿದ್ದ ಸಾರ್ವಜನಿಕರ ಬಳಕೆಯ ಆಸನಗಳು ಗೊಬ್ಬೆದ್ದು ನಾರುತ್ತಿದ್ದವು. ಕುರ್ಚಿಯಲ್ಲಿ ಕುಳಿತುಕೊಳ್ಳಲು ಅಸಹ್ಯಪಡುತ್ತಿದ್ದರು.ಪ್ರತಿವರ್ಷ ಪೀಠೋಪಕರಣಗಳ ಬದಲಾವಣೆಗಾಗಿ ಆಯವ್ಯಯದಲ್ಲಿ ಲಕ್ಷಾಂತರ ರೂ ಮೀಸಲಿಟ್ಟರೂ ಕುರ್ಚಿಗಳು ಮಾತ್ರ ಬದಲಾಗಿರಲಿಲ್ಲ.ನೂತನ ಶಾಸಕ ದರ್ಶನ್ ಧೃವನಾರಾಯಣ್ ಸಹ ಕುರ್ಚಿಗಳನ್ನ ಬದಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ತಲೆ ಕೆಡಿಸಿಕೊಂಡಿರಲಿಲ್ಲ.ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ Tv10 ಕನ್ನಡ ಎರಡು ದಿನಗಳ ಹಿಂದೆ ವರದಿ ಮಾಡಿತ್ತು.ವರದಿಗೆ ಎಚ್ಚೆತ್ತ ನಗರಸಭಾ ಆಯುಕ್ತ ನಂಜುಂಡಸ್ವಾಮಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶ್ರೀನಿವಾಸ ರವರು ರಾತ್ರೋ ರಾತ್ರಿ ಕುರ್ಚಿಗಳನ್ನ ಬದಲಿಸಿದ್ದಾರೆ.ಶಾಸಕ ದರ್ಶನ್ ಧೃವನಾರಾಯಣ್ ಹಾಗೂ ಜಿಲ್ಲಾಧಿಕಾರಿ ರಾಜೇಂದ್ರ ರವರ ಖಡಕ್ ಸೂಚನೆಗೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ ಇದು Tv10 ಕನ್ನಡ ವರದಿ ಇಂಪ್ಯಾಕ್ಟ್…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *