ಮೈಸೂರ್ ಪಾಕ್ ಗರ ಜಾಗತಿಕ ಮನ್ನಣೆ…ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಿಸಿ ಸಂಭ್ರಮಾಚರಣೆ…

ಮೈಸೂರ್ ಪಾಕ್ ಗರ ಜಾಗತಿಕ ಮನ್ನಣೆ…ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಿಸಿ ಸಂಭ್ರಮಾಚರಣೆ…

ಮೈಸೂರು,ಜು25,Tv10 ಕನ್ನಡ
ಮೈಸೂರು ಪಾಕ್ ಗೆ ದೊರೆತ ಜಾಗತಿಕ ಮನ್ನಣೆಯನ್ನ ಸ್ವಾಗತಿಸಿ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮೈಸೂರು ಪಾಕ್ ವಿತರಿಸಿ ಸಂಭ್ರಮಿಸಲಾಯಿತು.
ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ ಮೈಸೂರು ಪಾಕ್ ಖ್ಯಾತಿ ಗಳಿಸಿರುವ ಹಿನ್ನಲೆಯಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಪ್ರವಾಸಿಗರಿಗೆ ಹಾಗೂ ಭಕ್ತಾದಿಗಳಿಗೆ ಮೈಸೂರು ಪಾಕ್ ವಿತರಿಸಿ ಮೈಸೂರು ಪಾಕ್ ಮಹತ್ವ ಹಾಗೂ ಅದರ ಇತಿಹಾಸ ತಿಳಿಸಲಾಯಿತು. ಮಾಜಿನಗರ ಪಾಲಿಕಾ ಸದಸ್ಯ ಎಂ ಡಿ
ಪಾರ್ಥಸಾರಥಿ ಮಾತನಾಡಿ
ಕರ್ನಾಟಕದ ಜನಪ್ರಿಯ ಸಿಹಿತಿನಿಸಾಗಿರುವ ಮೈಸೂರ್ ಪಾಕ್ ನ ರುಚಿಯನ್ನು ಸವಿಯದವರೇ ವಿರಾಳ ಎನ್ನಬೇಕು. ವಿಶ್ವದ ಸಿಹಿತಿನಿಸುಗಳ ಪಟ್ಟಿಯಲ್ಲಿ ನಮ್ಮ ಮೈಸೂರ್‌ಪಾಕ್‌ಗೆ 14ನೇ ಸ್ಥಾನ ದಕ್ಕಿರುವುದು ಕರ್ನಾಟಕ ಪಾಲಿಗೆ ಹೆಮ್ಮೆಯ ವಿಷಯವೇ ಸರಿ.ಮೈಸೂರುಪಾಕ್‌ಗೆ 90 ವರ್ಷಗಳ ಇತಿಹಾಸವಿದೆ. ಈ ಖಾದ್ಯವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಮೈಸೂರು ಅರಮನೆಯ ಬಾಣಸಿಗ ಮಾದಪ್ಪ ಅವರಿಗೆ ಸಲ್ಲಬೇಕು. ಆಗಿನ ಮೈಸೂರಿನ ಮಹಾರಾಜ ಕೃಷ್ಣರಾಜ ಒಡೆಯರ್‌ರವರ ಅಂದಿನ ಊಟಕ್ಕೆ ಸಿಹಿಯಿಲ್ಲದಿದ್ದುದನ್ನು ಗಮನಿಸಿದ ಮಾದಪ್ಪ, ಕಡಲೇಹಿಟ್ಟು, ತುಪ್ಪ, ಸಕ್ಕರೆಗಳ ಹದವಾದ ಮಿಶ್ರಣವನ್ನು ಬಳಸಿ ತಯಾರಿಸಿದ ಸಿಹಿತಿಂಡಿಯೇ ಮೈಸೂರ್‌ಪಾಕ್‌!
ವಿಶ್ವದ ಅಗ್ರಗಣ್ಯ ಸಿಹಿತಿಂಡಿಗಳಲ್ಲಿ ಪ್ರಸ್ತುತ 14ನೇ ಸ್ಥಾನ ಗಳಿಸಿರುವ ನಮ್ಮೆಲ್ಲರ ಹೆಮ್ಮೆಯ ಮೈಸೂರ್‌ಪಾಕ್ ಮೊದಲ ಸ್ಥಾನಕ್ಕೆ ಬರುವಂತಾಗಲಿ ಎಂದು ಆಶಿಸೋಣ ಎಂದರು.
ಈ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಡಾಕ್ಟರ್ ಶಶಿಶೇಖರ ದೀಕ್ಷಿತ್, ಜಗದೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಸುರೇಶ್, ಸಾಮಾಜಿಕ ಚಿಂತಕರಾದ ದೂರ ರಾಜಣ್ಣ, ಆನಂದ್ ದಯಾನಂದ, ಆದರ್ಶ್, ಅಮರ್ ಬಾಬು, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *