ಎಕ್ಸಾಂ ಫೀಸ್ ಸಮೇತ ಪ್ರೊಫೆಸರ್ ಎಸ್ಕೇಪ್…ವಿಧ್ಯಾರ್ಥಿಗಳು ಶಾಕ್…ಪೇಚಿಗೆ ಸಿಲುಕಿದ ಸ್ಟೂಡೆಂಟ್ಸ್…

ಎಕ್ಸಾಂ ಫೀಸ್ ಸಮೇತ ಪ್ರೊಫೆಸರ್ ಎಸ್ಕೇಪ್…ವಿಧ್ಯಾರ್ಥಿಗಳು ಶಾಕ್…ಪೇಚಿಗೆ ಸಿಲುಕಿದ ಸ್ಟೂಡೆಂಟ್ಸ್…

*ಮೈಸೂರು,ಜು25,Tv10 ಕನ್ನಡ
ವಿಧ್ಯಾರ್ಥಿಗಳು ಪರೀಕ್ಷೆ ಬರೆಯಲು ಪಾವತಿಸಿದ ಹಣದ ಸಮೇತ ಪ್ರೊಫೆಸರ್ ಒಬ್ಬರು ಎಸ್ಕೇಪ್ ಆಗಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಪರೀಕ್ಷೆ ಬರೆಯಲು ಸಾಧ್ಯವಾಗದ ಕಾರಣ ವಿಧ್ಯಾರ್ಥಿಗಳು ಪೇಚಿಗೆ ಸಿಲುಕಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರೊಫೆಸರ್ ನಡುವಿನ ಶೀತಲ ಸಮರಕ್ಕೆ ವಿಧ್ಯಾರ್ಥಿಗಳು ಪರಿಪಾಟಲು ಪಡುತ್ತಿದ್ದಾರೆ.ಕಾಲೇಜಿನ‌ ಆಡಳಿತ ಮಂಡಳಿ ವಿರುದ್ದ ಪೋಷಕರು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.
25 ಲಕ್ಷ ರೂಗಳೊಂದಿಗೆ ಮಹಿಳಾ ಪ್ರೊಫೆರ್ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ಮೈಸೂರಿನ ಪ್ರತಿಷ್ಠಿತ ಎಟಿಎಂಇ ಕಾಲೇಜಿನಲ್ಲಿ ಈ ಪ್ರಕರಣ ನಡೆದಿದ್ದು, 200 ವಿದ್ಯಾರ್ಥಿಗಳು ವಂಚನೆಗೆ ಒಳಗಾಗಿದ್ದಾರೆ.
ವಿದ್ಯಾರ್ಥಿಗಳಿಂದ ಫೀಸ್ ಕಲೆಕ್ಟ್ ಮಾಡಿದ್ದ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ ಸಹಾಯಕ ಪ್ರಾಧ್ಯಾಪಕಿ ಹರ್ಷಿತಾ ಎಂಬ ಪ್ರೊಫೆಸರ್‌ ಸಂಗ್ರಹಿಸಿದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ.
ಈ ಸಂಬಂಧ ವಿದ್ಯಾರ್ಥಿಗಳು ವರುಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿ ಪ್ರೊ.ಹರ್ಷಿತಾ ಹಾಗೂ ಎಟಿಎಂಐ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ನಾಳೆಯೇ ಪರೀಕ್ಷೆ ನಿಗದಿಯಾಗಿದೆ.ಅತ್ತ‌ ಪ್ರೊ.ಹರ್ಷಿತ ನಾಪತ್ತೆಯಾಗಿದ್ದಾರೆ ಇತ್ತ‌ ಕಾಲೇಜು ಆಡಳಿತ ಮಂಡಳಿ
ಹರ್ಷಿತಾಗೂ ನಮಗೂ ಸಂಬಂಧ ಇಲ್ಲ.
ಹೊಸದಾಗಿ ಫೀಸ್ ಕಟ್ಟಿ ಎನ್ನುತ್ತಿದೆ.ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಕಟ್ಟಿರುವುದರಿಂದ ಸರಿಯಾದ‌ ದಾಖಲೆ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಗೆ ಸಿಲುಕಿದ್ದಾರೆ.
ಪರೀಕ್ಷೆ ಬರೆಯಲು ಆಡಳಿತ ಮಂಡಳಿ ಬಿಡುವುದೆ,ಪೊಲೀಸರು ಅವರಿಗೆ ನ್ಯಾಯ ದೊರಕಿಸಿ‌ ಕೊಟ್ಟಾರೆಯೆ ಎಂಬುದನ್ನು ಕಾದು ನೋಡಬೇಕಿದೆ.
ನಕಲಿ ರಶೀದಿ ನೀಡಿ ಪ್ರೊ.ಹರ್ಷಿತಾ‌ ವಿದ್ಯಾರ್ಥಿಗಳನ್ನು ಯಾಮಾರಿಸಿದ್ದಾರೆ ಪೊಲೀಸರು ಏನು ಕ್ರಮ ಕೈಗೊಳ್ಳುವರು‌,ಆಡಳಿತ‌ ಮಂಡಳಿ ಆಕೆಯ ವಿರುದ್ದ‌‌ ಏನು ಕ್ರಮ ತೆಗೆದುಕೊಳ್ಳುವುದು‌ ಎಂಬುದು ಕಾದುನೋಡಬೇಕಿದೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *