ಮೈಸೂರು:ಗೃಹಲಕ್ಷ್ಮಿ ಯೋಜನೆ ಫೇಕ್ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕ ಬಂಧನ…

ಆರೋಪಿ ಸುರೇಶ್ ಕುಮಾರ್

ಮೈಸೂರು:ಗೃಹಲಕ್ಷ್ಮಿ ಯೋಜನೆ ಫೇಕ್ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕ ಬಂಧನ…

ಮೈಸೂರು,ಜು26,Tv10 ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ ಮಹತ್ತರ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ.ಮೇಟಗಳ್ಳಿಯ ಸುಧಾಮೂರ್ತಿ ರಸ್ತೆಯಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಮಾಲೀಕ ಸುರೇಶ್ ಕುಮಾರ್ ಎಂಬಾತನನ್ನ

ಬಂಧಿಸಲಾಗಿದೆ.ಎಸಿಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಸೈಬರ್ ಸೆಂಟರ್ ಮೇಲೆ ದಾಳಿ ನಡೆಸಲಾಗಿದೆ.ಕೆಲವು ಫೇಕ್ ಸರ್ಟಿಫಿಕೇಟ್ ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಸುಕೇಶ್ ಕುಮಾರ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಗೆ ಬೀಗ ಜಡಿಯಲಾಗಿದೆ.ಮಹಿಳೆಯರಿಗೆ ತಿಂಗಳಿಗೆ 2000 ರೂ ನೀಡುವ ಮಹತ್ತರ ಯೋಜನೆ ಗೃಹಲಕ್ಷ್ಮಿ ಯೋಜನೆ ಇದಾಗಿದೆ.ಸಾಕಷ್ಟು ಮಹಿಳೆಯರು ನೊಂದಣಿಗಾಗಿ ಸೈಬರ್ ಸೆಂಟರ್ ಗಳ ಮೊರೆ ಹೋಗಿದ್ದಾರೆ.ಇದನ್ನೇ ಲಾಭ ಮಾಡಿಕೊಂಡ ಖದೀಮ ಸುರೇಶ್ ಕುಮಾರ್ ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪಡಿಸಿ ಯಾಮಾರಿಸಿದ್ದಾನೆ.ಮೇಟಗಳ್ಳಿಯ ಸುಧಾಮೂರ್ತಿ ರಸ್ತೆಯಲ್ಲಿ ನಕುಲ್ ನೆಟ್ ವರ್ಲ್ಡ್ ಎಂಬ ಹೆಸರಿನಲ್ಲಿ ಅನಧಿಕೃತವಾಗಿ ಸೇವಾ ಕೇಂದ್ರ ಆರಂಭಿಸಿ ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪಡಿಸುತ್ತಿರವುದು ಪೊಲೀಸರಿಗೆ ತಿಳಿದು ಬಂದಿದೆ.ಸಧ್ಯ ಸೈಬರ್ ಸೆಂಟರ್ ನ ಕಂಪ್ಯೂಟರ್ ಗಳನ್ನ ಸೀಜ್ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಹಾಗೂ ಡಿಸಿಪಿ ಗಳಾದ ಮುತ್ತುರಾಜ್ ಮತ್ತು ಜಾಹ್ನವಿ ರವರ ಉಸ್ತುವಾರಿಯಲ್ಲಿ ಎಸಿಪಿ ಗಜೇಂದ್ರ ಪ್ರಸಾದ್ ಮತ್ತು ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *