ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯ…ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪಕಚೇರಿಗೆ ಬೀಗ ಜಡಿದು ಪ್ರತಿಭಟನೆ…

ಮೈಸೂರು,ಜು27,Tv10 ಕನ್ನಡ

ಕಬ್ಬಿನ ಬಾಕಿ ಹಣ ಪಾವತಿಸದೆ ಕಾರ್ಖಾನೆಗೆ ಕಬ್ಬು ಕಟಾವು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆ ಉಪ ಕಚೇರಿಗೆ ಬೀಗ ಜಡಿದ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬಣ್ಣಾರಿ ಅಮ್ಮನ್ ಕಾರ್ಖಾನೆಯ ಮೈಸೂರು ತಾಲೂಕಿನ ಕಡಕೋಳದಲ್ಲಿರುವ ಡಿವಿಜನ್ ಆಫೀಸ್ ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ ಕಾರ್ಖಾನೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.
ಕಳೆದ ವರ್ಷದ ಬಾಕಿ ಹಣ ಒಂದು ಟನ್ ಕಬ್ಬಿಗೆ 150 ರೂಗಳನ್ನು ನೀಡಿ ನಂತರ ಕಾರ್ಖಾನೆ ಕಬ್ಬು ಅರೆಯುವುದನ್ನು ಪ್ರಾರಂಭ ಮಾಡಲಿ
24.07.2023ರಂದು ಮೈಸೂರಿನ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ರೈತರು ಮತ್ತು ಕಾರ್ಖಾನೆಯವರ ನಡುವೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರೂ ಸಹ ಕಾರ್ಖಾನೆ ಅವರು ಹಣ ನೀಡದೆ ಕಾರ್ಖಾನೆ ಆರಂಭಿಸಿ ರೈತರಿಗೆ ವಂಚನೆ ಮಾಡುತ್ತಿದ್ದಾರೆ. ಆದ್ದರಿಂದ ಕಳೆದ ವರ್ಷದ ಬಾಕಿ ಹಣವನ್ನು ಕೊಟ್ಟು ನಂತರ ಕಾರ್ಖಾನೆ ಪ್ರಾರಂಭ ಮಾಡಲಿ ಅಲ್ಲಿಯವರೆಗೂ ಕಬ್ಬು ಕಟಾವು ಮಾಡುವುದು ಬೇಡ ಎಂದು ಬಣ್ಣಾರಿ ಕಾರ್ಖಾನೆಯ ಎಲ್ಲಾ ತಾಲೂಕಿನ ಶಾಖ ಕಚೇರಿಗಳನ್ನು ಬೀಜಮುದ್ರೆ ಹಾಕಿ ಬೀಗ ಜಡಿದು ಸಂಜೆ ಒಳಗೆ ಹಣ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾಳೆಯಿಂದ ಕಾರ್ಖಾನೆ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷರಾದ ಪಟೇಲ್ ಶಿವಮೂರ್ತಿ, ಮೈಸೂರು ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕಮಲಮ್ಮ, ಮುಖಂಡರಾದ ಕುರುಬೂರು ಪ್ರದೀಪ್, ಹೆಗ್ಗೂರು ರಂಗರಾಜು, ಅಂಬಳೆ ಮಂಜುನಾಥ್, ವರಕೋಡು ನಾಗೇಶ್, ಜಯರಾಮು, ಮಾರ್ಬಳ್ಳಿ ನೀಲಕಂಠಪ್ಪ,ವಾಜಮಂಗಲ ಮಾದೇವು, ಮಾಲಿಂಗ ನಾಯಕ, ನಾಗರಾಜು, ಹೆಗ್ಗೋಟಾರ ಶಿವ ಸ್ವಾಮಿ, ಉಡಿಗಾಲ ರೇವಣ್ಣ, ಸುಂದರಪ್ಪ, ಕುರುಬೂರು ಜಗ್ಗೇಶ್, ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *