ಮೈಸೂರು:ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ…ತಂತಿ ಕೆಳಗೆ ಸಿಲುಕಿದ ವಾಹನ ಹೊರ ತೆರೆಯಲು ಯತ್ನಿಸಿ ಇಬ್ಬರು ಸಾವು…ಮೂವರಿಗೆ ಗಾಯ…

  • Crime
  • July 28, 2023
  • No Comment
  • 329

ಮೈಸೂರು,ಜು28,Tv10 ಕನ್ನಡ

ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನ ಹೊರತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಸಂಪರ್ಕ ಸಾಧಿಸಿ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ.ಯುವಕರ ಸಹಾಯಕ್ಕೆ ಬಂದ ಮೂವರು ಗಾಯಗೊಂಡಿದ್ದಾರೆ.ಅಶೋಕಾ ಪುರಂ ನಿವಾಸಿಗಳಾದ ಕಿರಣ್ ಹಾಗೂ ರವಿಕುಮಾರ್ ಮೃತ ದುರ್ದೈವಿಗಳು.ಇವರ ನೆರವಿಗೆ ಬಂದ ರವಿ,ಸಂದೇಶ್,ಶಿವಕುಮಾರ್ ವಿದ್ಯುತ್ ಶಾಕ್ ನಿಂದ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ತಡರಾತ್ರಿ ಘಟನೆ ನಡೆದಿದೆ.ಸಂಸದ ಶ್ರೀನಿವಾಸ್ ಪ್ರಸಾದ್ ರವರ ಸಂಬಂಧಿಕರಿಗೆ ಸೇರಿದ ಇನೋವಾ ಕಾರನ್ನ ಟ್ರಯಲ್ ನೋಡುವುದಾಗಿ ರವಿಕುಮಾರ್ ಪಡೆದಿದ್ದಾರೆ.ಮಾನಂದವಾಡಿ ರಸ್ತೆಯಲ್ಲಿ ರವಿಕುಮಾರ್,ಭಾಸ್ಕರ್,ರವಿ,ಸಂದೇಶ್ ಹಾಗೂ ಶಿವಕುಮಾರ್ ಆಶೋಕಾಪುರಂ ನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.ಕಾರಿನಿಂದ ನಾಲ್ವರೂ ಹೊರಬಂದ ನಂತರ ವಿದ್ಯುತ್ ತಂತಿ ಸಂಪರ್ಕ ಪಡೆದಿದೆ.ಕಾಂಪೌಂಡ್ ಹಾಗೂ ಕಂಬದ ನಡುವೆ ಸಿಲುಕಿದ ಕಾರನ್ನ ಹೊರತರಲು ಯತ್ನಿಸಿದ್ದಾರೆ.ಈ ವೇಳೆ ಆಟೋದಲ್ಲಿ ಬರುತ್ತಿದ್ದ ಡ್ರೈವರ್ ಕಿರಣ್ ಕುಮಾರ್ ನೆರವಿಗೆ ಬಂದಿದ್ದಾರೆ.ಕಾರನ್ನ ಹೊರತರುವ ಯತ್ನದಲ್ಲಿದ್ದ ಇವರಿಗೆ ವಿದ್ಯುತ್ ಸಂಪರ್ಕ ಸಾಧಿಸಿದೆ.ಹೈವೋಲ್ಟೇಜ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ರವಿಕುಮಾರ್ ಕುಸಿದುಬಿದ್ದಿದ್ದಾರೆ.ನೆರವಿಗೆ ಬಂದ ಆಟೋಡ್ರೈವರ್ ಕಿರಣ್ ರವರೂ ಸಹ ಮೃತಪಟ್ಟಿದ್ದಾರೆ.ಇವರಿಬ್ಬರ ನೆರವಿಗೆ ಬಂದ ರವಿ,ಸಂದೇಶ್,ಶಿವಕುಮಾರ್ ಗೂ ಶಾಕ್ ಹೊಡೆದಿದೆ.ಐವರನ್ನೂ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.ರವಿಕುಮಾರ್ ಹಾಗೂ ಕಿರಣ್ ಮೃತಪಟ್ಟಿದ್ದಾರೆ.ಮೂವರಿಗೆ ಗಾಯಗಳಾಗಿವೆ.ಭಾಸ್ಕರ್ ಅವಘಢದಿಂದ ತಪ್ಪಿಸಿಕೊಂಡಿದ್ದಾರೆ.

ಕೆ.ಆರ್.ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *