ಮೈಸೂರು:ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ…ತಂತಿ ಕೆಳಗೆ ಸಿಲುಕಿದ ವಾಹನ ಹೊರ ತೆರೆಯಲು ಯತ್ನಿಸಿ ಇಬ್ಬರು ಸಾವು…ಮೂವರಿಗೆ ಗಾಯ…

  • Crime
  • July 28, 2023
  • No Comment
  • 333

ಮೈಸೂರು,ಜು28,Tv10 ಕನ್ನಡ

ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನ ಹೊರತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಸಂಪರ್ಕ ಸಾಧಿಸಿ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ.ಯುವಕರ ಸಹಾಯಕ್ಕೆ ಬಂದ ಮೂವರು ಗಾಯಗೊಂಡಿದ್ದಾರೆ.ಅಶೋಕಾ ಪುರಂ ನಿವಾಸಿಗಳಾದ ಕಿರಣ್ ಹಾಗೂ ರವಿಕುಮಾರ್ ಮೃತ ದುರ್ದೈವಿಗಳು.ಇವರ ನೆರವಿಗೆ ಬಂದ ರವಿ,ಸಂದೇಶ್,ಶಿವಕುಮಾರ್ ವಿದ್ಯುತ್ ಶಾಕ್ ನಿಂದ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ತಡರಾತ್ರಿ ಘಟನೆ ನಡೆದಿದೆ.ಸಂಸದ ಶ್ರೀನಿವಾಸ್ ಪ್ರಸಾದ್ ರವರ ಸಂಬಂಧಿಕರಿಗೆ ಸೇರಿದ ಇನೋವಾ ಕಾರನ್ನ ಟ್ರಯಲ್ ನೋಡುವುದಾಗಿ ರವಿಕುಮಾರ್ ಪಡೆದಿದ್ದಾರೆ.ಮಾನಂದವಾಡಿ ರಸ್ತೆಯಲ್ಲಿ ರವಿಕುಮಾರ್,ಭಾಸ್ಕರ್,ರವಿ,ಸಂದೇಶ್ ಹಾಗೂ ಶಿವಕುಮಾರ್ ಆಶೋಕಾಪುರಂ ನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.ಕಾರಿನಿಂದ ನಾಲ್ವರೂ ಹೊರಬಂದ ನಂತರ ವಿದ್ಯುತ್ ತಂತಿ ಸಂಪರ್ಕ ಪಡೆದಿದೆ.ಕಾಂಪೌಂಡ್ ಹಾಗೂ ಕಂಬದ ನಡುವೆ ಸಿಲುಕಿದ ಕಾರನ್ನ ಹೊರತರಲು ಯತ್ನಿಸಿದ್ದಾರೆ.ಈ ವೇಳೆ ಆಟೋದಲ್ಲಿ ಬರುತ್ತಿದ್ದ ಡ್ರೈವರ್ ಕಿರಣ್ ಕುಮಾರ್ ನೆರವಿಗೆ ಬಂದಿದ್ದಾರೆ.ಕಾರನ್ನ ಹೊರತರುವ ಯತ್ನದಲ್ಲಿದ್ದ ಇವರಿಗೆ ವಿದ್ಯುತ್ ಸಂಪರ್ಕ ಸಾಧಿಸಿದೆ.ಹೈವೋಲ್ಟೇಜ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ರವಿಕುಮಾರ್ ಕುಸಿದುಬಿದ್ದಿದ್ದಾರೆ.ನೆರವಿಗೆ ಬಂದ ಆಟೋಡ್ರೈವರ್ ಕಿರಣ್ ರವರೂ ಸಹ ಮೃತಪಟ್ಟಿದ್ದಾರೆ.ಇವರಿಬ್ಬರ ನೆರವಿಗೆ ಬಂದ ರವಿ,ಸಂದೇಶ್,ಶಿವಕುಮಾರ್ ಗೂ ಶಾಕ್ ಹೊಡೆದಿದೆ.ಐವರನ್ನೂ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.ರವಿಕುಮಾರ್ ಹಾಗೂ ಕಿರಣ್ ಮೃತಪಟ್ಟಿದ್ದಾರೆ.ಮೂವರಿಗೆ ಗಾಯಗಳಾಗಿವೆ.ಭಾಸ್ಕರ್ ಅವಘಢದಿಂದ ತಪ್ಪಿಸಿಕೊಂಡಿದ್ದಾರೆ.

ಕೆ.ಆರ್.ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *