ಹಬ್ಬ ಅಂದಮೇಲೆ ಕಷ್ಟವೋ ಸುಖವೋ ಮರಿಯಂತೂ ಹೊಡೆಯುತ್ತೇವೆ…ದಸರಾ ಆಚರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಹೇಳಿಕೆ…

ಮೈಸೂರು,ಜು29,Tv10 ಕನ್ನಡ

ದಸರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಹಬ್ಬಕ್ಕೆ ನೆಂಟರಿಷ್ಟರನ್ನು ಕರೆದು ಅರ್ಧ ಊಟ ಮಾಡಿ ಎಂದು ಹೇಳಲು ಸಾಧ್ಯನಾ?
ಕಷ್ಟವೋ ಸುಖವೋ ಮರಿಯಂತು ಹೊಡೆಯುತ್ತೇವೆ ಅಲ್ವಾ.ದಸರಾ ಮಹೋತ್ಸವವನ್ನೂ ಹಾಗೆ ಎಲ್ಲರನ್ನು ಕರೆದು ಅದ್ದೂರಿಯಾಗಿಯೇ ಮಾಡೋಣ.
ಕೋವಿಡ್ ನಿಂದ ಜನ ತತ್ತರಿಸಿ ಹೋಗಿದ್ದರು.
ಈಗ ಎಲ್ಲವೂ ಸುಭೀಕ್ಷವಾಗಿ ನಡೆಯುತ್ತಿದೆ.
ಹೊಸ ಸರ್ಕಾರ ಬಂದಿದೆ, ಮಳೆಯಾಗಿದೆ.
ಎಲ್ಲರೂ ಮನ ಬಿಚ್ಚಿ ಉತ್ತಮ ದಸರಾ ಮಾಡೋಣ.
ಮೈಸೂರಿನ ಸಂಸ್ಕೃತಿ ಮಹರಾಜರ ಪರಂಪರೆ ಎಲ್ಲವನ್ನು ಉಳಿಸಿಕೊಂಡು ದಸರಾ ಮಾಡಬೇಕಿದೆ.
ಇದೆಲ್ಲದರ ಬಗ್ಗೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತೆ ಎಂದರು.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಮತ್ತು ಕೃಷಿ ಚಟುವಟಿಕೆ ಪ್ರಕ್ರಿಯೆ ಕುರಿತು ಮಾತನಾಡಿದ ಸಚಿವರು
ಪೂರ್ವ ಮುಂಗಾರು ಮಳೆ ಜಿಲ್ಲೆಯಲ್ಲಿ ವಾಡಿಗಿಂತ ಹೆಚ್ಚು ಬಿದ್ದಿದೆ.
ವಾಡಿಕೆಯಂತೆ ಮಾರ್ಚ್ ನಿಂದ ಮೇ ವರಗೆ 198 ಮಿ.ಮೀ ಇತ್ತು.
ಈ ಬಾರಿ 207 ಮಿ.ಮೀ ಗೂ ಹೆಚ್ಚು ಮಳೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ಮಳೆ ಸಾಧಾರಣ ಮಳೆ ಆಗಿದೆ.
ಮೈಸೂರು ಜಿಲ್ಲೆಯಲ್ಲಿ 198.10 ಎಂಎಂ ವಾಡಿಕೆ ಮಳೆ.
207.2 ಎಂಎಂ ಮಳೆಯಾಗಿದೆ.
ಅಂದರೆ ಶೇ.4.59ರಷ್ಟು ಹೆಚ್ಚು ಮಳೆ ಆಗಿದೆ.
ಜೂನ್ 1ರಿಂದ ಜುಲೈ 27ರವರೆಗಿನ ಮುಂಗಾರು ಅವಧಿಯಲ್ಲಿ 202.1 ಎಂಎಂ ವಾಡಿಕೆ ಮಳೆ.‌
165.5 ಮಳೆ ಆಗಿದೆ.
ಅಂದರೆ ಜಿಲ್ಲೆಯಲ್ಲಿ -17.61 ಮಳೆ ಕೊರತೆ ಆಗಿದೆ. ಮಾರ್ಚ್‌ನಿಂದ ಇಲ್ಲಿಯವರೆಗೆ 378 ಎಂಎಂ ಮಳೆ ಆಗಿದೆ.
ಶೇ.7.19ರಷ್ಟು ಮಳೆ ಕೊರತೆ ಆಗಿದೆ.
ಮುಂಗಾರಿನಲ್ಲಿ 3.97 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ. ಈಗ 2.11 ಬಿತ್ತನೆ ಆಗಿದೆ ಎಂದು ಸುದ್ದಿ ಗೋಷ್ಠಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿಎಂ ಮಾಹಿತಿ ನೀಡಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *