ಹಬ್ಬ ಅಂದಮೇಲೆ ಕಷ್ಟವೋ ಸುಖವೋ ಮರಿಯಂತೂ ಹೊಡೆಯುತ್ತೇವೆ…ದಸರಾ ಆಚರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಹೇಳಿಕೆ…

ಮೈಸೂರು,ಜು29,Tv10 ಕನ್ನಡ

ದಸರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಹಬ್ಬಕ್ಕೆ ನೆಂಟರಿಷ್ಟರನ್ನು ಕರೆದು ಅರ್ಧ ಊಟ ಮಾಡಿ ಎಂದು ಹೇಳಲು ಸಾಧ್ಯನಾ?
ಕಷ್ಟವೋ ಸುಖವೋ ಮರಿಯಂತು ಹೊಡೆಯುತ್ತೇವೆ ಅಲ್ವಾ.ದಸರಾ ಮಹೋತ್ಸವವನ್ನೂ ಹಾಗೆ ಎಲ್ಲರನ್ನು ಕರೆದು ಅದ್ದೂರಿಯಾಗಿಯೇ ಮಾಡೋಣ.
ಕೋವಿಡ್ ನಿಂದ ಜನ ತತ್ತರಿಸಿ ಹೋಗಿದ್ದರು.
ಈಗ ಎಲ್ಲವೂ ಸುಭೀಕ್ಷವಾಗಿ ನಡೆಯುತ್ತಿದೆ.
ಹೊಸ ಸರ್ಕಾರ ಬಂದಿದೆ, ಮಳೆಯಾಗಿದೆ.
ಎಲ್ಲರೂ ಮನ ಬಿಚ್ಚಿ ಉತ್ತಮ ದಸರಾ ಮಾಡೋಣ.
ಮೈಸೂರಿನ ಸಂಸ್ಕೃತಿ ಮಹರಾಜರ ಪರಂಪರೆ ಎಲ್ಲವನ್ನು ಉಳಿಸಿಕೊಂಡು ದಸರಾ ಮಾಡಬೇಕಿದೆ.
ಇದೆಲ್ಲದರ ಬಗ್ಗೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತೆ ಎಂದರು.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಮತ್ತು ಕೃಷಿ ಚಟುವಟಿಕೆ ಪ್ರಕ್ರಿಯೆ ಕುರಿತು ಮಾತನಾಡಿದ ಸಚಿವರು
ಪೂರ್ವ ಮುಂಗಾರು ಮಳೆ ಜಿಲ್ಲೆಯಲ್ಲಿ ವಾಡಿಗಿಂತ ಹೆಚ್ಚು ಬಿದ್ದಿದೆ.
ವಾಡಿಕೆಯಂತೆ ಮಾರ್ಚ್ ನಿಂದ ಮೇ ವರಗೆ 198 ಮಿ.ಮೀ ಇತ್ತು.
ಈ ಬಾರಿ 207 ಮಿ.ಮೀ ಗೂ ಹೆಚ್ಚು ಮಳೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ಮಳೆ ಸಾಧಾರಣ ಮಳೆ ಆಗಿದೆ.
ಮೈಸೂರು ಜಿಲ್ಲೆಯಲ್ಲಿ 198.10 ಎಂಎಂ ವಾಡಿಕೆ ಮಳೆ.
207.2 ಎಂಎಂ ಮಳೆಯಾಗಿದೆ.
ಅಂದರೆ ಶೇ.4.59ರಷ್ಟು ಹೆಚ್ಚು ಮಳೆ ಆಗಿದೆ.
ಜೂನ್ 1ರಿಂದ ಜುಲೈ 27ರವರೆಗಿನ ಮುಂಗಾರು ಅವಧಿಯಲ್ಲಿ 202.1 ಎಂಎಂ ವಾಡಿಕೆ ಮಳೆ.‌
165.5 ಮಳೆ ಆಗಿದೆ.
ಅಂದರೆ ಜಿಲ್ಲೆಯಲ್ಲಿ -17.61 ಮಳೆ ಕೊರತೆ ಆಗಿದೆ. ಮಾರ್ಚ್‌ನಿಂದ ಇಲ್ಲಿಯವರೆಗೆ 378 ಎಂಎಂ ಮಳೆ ಆಗಿದೆ.
ಶೇ.7.19ರಷ್ಟು ಮಳೆ ಕೊರತೆ ಆಗಿದೆ.
ಮುಂಗಾರಿನಲ್ಲಿ 3.97 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ. ಈಗ 2.11 ಬಿತ್ತನೆ ಆಗಿದೆ ಎಂದು ಸುದ್ದಿ ಗೋಷ್ಠಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿಎಂ ಮಾಹಿತಿ ನೀಡಿದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *