ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿ…ಸಾರ್ವಜನಿಕರಿಗೆ ಉದಯಗಿರಿ ಇನ್ಸ್ಪೆಕ್ಟರ್ ರಾಜು ಮನವಿ…

ಮೈಸೂರು,ಜು30,Tv10 ಕನ್ನಡ

ಮೈಸೂರು,ಜು30,Tv10 ಕನ್ನಡ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನವಾದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ದುಷ್ಕರ್ಮಿಗಳ ಸೆದೆಬಡಿಯಲು ನೈಟ್ ಬೀಟ್ ವ್ಯವಸ್ಥೆಯನ್ನ ಮತ್ತಷ್ಟು ಬಿಗಿ ಪಡಿಸುತ್ತಿದ್ದಾರೆ.ಈಗಾಗಲೇ ಜಾರಿಯಲ್ಲಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯನ್ನ ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿದ್ದಾರೆ.ಉದಯಗಿರಿ ಠಾಣೆ ಪೊಲೀಸರು ಸಾರ್ವಜನಿಕರ ನೆರವನ್ನೂ ಕೋರಿದ್ದಾರೆ. ಅಪರಿಚಿತ ಹಾಗೂ ಶಂಕಿತ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.ಮಾಹಿತಿದಾರರ ವಿವರವನ್ನ ಗೌಪ್ಯತೆಯಿಂದ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗೆ ಶಕ್ತಿನಗರದ ಪಾರ್ಕ್ ಸಮೀಪ ಇನ್ಸ್ಪೆಕ್ಟರ್ ಪಿ. ಕೆ. ರಾಜು ರವರು ಕರ್ತವ್ಯದ ಹಂಚಿಕೆಯನ್ನು ಮಾಡಿ ನಂತರ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.
ಶಕ್ತಿನಗರದ ನಾಗರೀಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸಂಭಾಷಣೆ ನಡೆಸಿ ಈ ಹಿಂದೆ ರಾತ್ರಿ ಗಸ್ತಿನ ಸಿಬ್ಬಂದಿಗಳು ಪಾಯಿಂಟ್ ಬುಕ್ ನಲ್ಲಿ ಸಹಿ ಮಾಡುವ ವ್ಯವಸ್ಥೆಯ ಬದಲಾಗಿ ಪೊಲೀಸ್ ಇಲಾಖೆಯ ವತಿಯಿಂದ ಜಾರಿಗೆ ತಂದಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬುವ ಪೊಲೀಸರ ಕೆಲಸಕ್ಕೆ ಪ್ರಶಂಸೆಗಳ ಸುರಿಮಳೆಯಾಗಿದೆ.ಈ ವೇಳೆ ಸಬ್ ಇನ್ಸ್ಪೆಕ್ಟರ್ ಸುನಿಲ್ ಹಾಗೂ ಸಿಬ್ಬಂದಿಗಳು ಹಾಜರಿದ್ದು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಧೈರ್ಯ ತುಂಬಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಹಾಗೂ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ಉಸ್ತುವಾರಿಯಲ್ಲಿ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ಉದಯಗಿರಿ ಠಾಣಾ ಪೊಲೀಸರು ರಾತ್ರಿ ಗಸ್ತನ್ನ ಬಿಗಿಗೊಳಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *