ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿ…ಸಾರ್ವಜನಿಕರಿಗೆ ಉದಯಗಿರಿ ಇನ್ಸ್ಪೆಕ್ಟರ್ ರಾಜು ಮನವಿ…

ಮೈಸೂರು,ಜು30,Tv10 ಕನ್ನಡ

ಮೈಸೂರು,ಜು30,Tv10 ಕನ್ನಡ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನವಾದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ದುಷ್ಕರ್ಮಿಗಳ ಸೆದೆಬಡಿಯಲು ನೈಟ್ ಬೀಟ್ ವ್ಯವಸ್ಥೆಯನ್ನ ಮತ್ತಷ್ಟು ಬಿಗಿ ಪಡಿಸುತ್ತಿದ್ದಾರೆ.ಈಗಾಗಲೇ ಜಾರಿಯಲ್ಲಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯನ್ನ ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿದ್ದಾರೆ.ಉದಯಗಿರಿ ಠಾಣೆ ಪೊಲೀಸರು ಸಾರ್ವಜನಿಕರ ನೆರವನ್ನೂ ಕೋರಿದ್ದಾರೆ. ಅಪರಿಚಿತ ಹಾಗೂ ಶಂಕಿತ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.ಮಾಹಿತಿದಾರರ ವಿವರವನ್ನ ಗೌಪ್ಯತೆಯಿಂದ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗೆ ಶಕ್ತಿನಗರದ ಪಾರ್ಕ್ ಸಮೀಪ ಇನ್ಸ್ಪೆಕ್ಟರ್ ಪಿ. ಕೆ. ರಾಜು ರವರು ಕರ್ತವ್ಯದ ಹಂಚಿಕೆಯನ್ನು ಮಾಡಿ ನಂತರ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.
ಶಕ್ತಿನಗರದ ನಾಗರೀಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸಂಭಾಷಣೆ ನಡೆಸಿ ಈ ಹಿಂದೆ ರಾತ್ರಿ ಗಸ್ತಿನ ಸಿಬ್ಬಂದಿಗಳು ಪಾಯಿಂಟ್ ಬುಕ್ ನಲ್ಲಿ ಸಹಿ ಮಾಡುವ ವ್ಯವಸ್ಥೆಯ ಬದಲಾಗಿ ಪೊಲೀಸ್ ಇಲಾಖೆಯ ವತಿಯಿಂದ ಜಾರಿಗೆ ತಂದಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬುವ ಪೊಲೀಸರ ಕೆಲಸಕ್ಕೆ ಪ್ರಶಂಸೆಗಳ ಸುರಿಮಳೆಯಾಗಿದೆ.ಈ ವೇಳೆ ಸಬ್ ಇನ್ಸ್ಪೆಕ್ಟರ್ ಸುನಿಲ್ ಹಾಗೂ ಸಿಬ್ಬಂದಿಗಳು ಹಾಜರಿದ್ದು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಧೈರ್ಯ ತುಂಬಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಹಾಗೂ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ಉಸ್ತುವಾರಿಯಲ್ಲಿ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ಉದಯಗಿರಿ ಠಾಣಾ ಪೊಲೀಸರು ರಾತ್ರಿ ಗಸ್ತನ್ನ ಬಿಗಿಗೊಳಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *