ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿ…ಸಾರ್ವಜನಿಕರಿಗೆ ಉದಯಗಿರಿ ಇನ್ಸ್ಪೆಕ್ಟರ್ ರಾಜು ಮನವಿ…

ಮೈಸೂರು,ಜು30,Tv10 ಕನ್ನಡ

ಮೈಸೂರು,ಜು30,Tv10 ಕನ್ನಡ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನವಾದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ದುಷ್ಕರ್ಮಿಗಳ ಸೆದೆಬಡಿಯಲು ನೈಟ್ ಬೀಟ್ ವ್ಯವಸ್ಥೆಯನ್ನ ಮತ್ತಷ್ಟು ಬಿಗಿ ಪಡಿಸುತ್ತಿದ್ದಾರೆ.ಈಗಾಗಲೇ ಜಾರಿಯಲ್ಲಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯನ್ನ ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿದ್ದಾರೆ.ಉದಯಗಿರಿ ಠಾಣೆ ಪೊಲೀಸರು ಸಾರ್ವಜನಿಕರ ನೆರವನ್ನೂ ಕೋರಿದ್ದಾರೆ. ಅಪರಿಚಿತ ಹಾಗೂ ಶಂಕಿತ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.ಮಾಹಿತಿದಾರರ ವಿವರವನ್ನ ಗೌಪ್ಯತೆಯಿಂದ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗೆ ಶಕ್ತಿನಗರದ ಪಾರ್ಕ್ ಸಮೀಪ ಇನ್ಸ್ಪೆಕ್ಟರ್ ಪಿ. ಕೆ. ರಾಜು ರವರು ಕರ್ತವ್ಯದ ಹಂಚಿಕೆಯನ್ನು ಮಾಡಿ ನಂತರ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.
ಶಕ್ತಿನಗರದ ನಾಗರೀಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸಂಭಾಷಣೆ ನಡೆಸಿ ಈ ಹಿಂದೆ ರಾತ್ರಿ ಗಸ್ತಿನ ಸಿಬ್ಬಂದಿಗಳು ಪಾಯಿಂಟ್ ಬುಕ್ ನಲ್ಲಿ ಸಹಿ ಮಾಡುವ ವ್ಯವಸ್ಥೆಯ ಬದಲಾಗಿ ಪೊಲೀಸ್ ಇಲಾಖೆಯ ವತಿಯಿಂದ ಜಾರಿಗೆ ತಂದಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬುವ ಪೊಲೀಸರ ಕೆಲಸಕ್ಕೆ ಪ್ರಶಂಸೆಗಳ ಸುರಿಮಳೆಯಾಗಿದೆ.ಈ ವೇಳೆ ಸಬ್ ಇನ್ಸ್ಪೆಕ್ಟರ್ ಸುನಿಲ್ ಹಾಗೂ ಸಿಬ್ಬಂದಿಗಳು ಹಾಜರಿದ್ದು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಧೈರ್ಯ ತುಂಬಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಹಾಗೂ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ಉಸ್ತುವಾರಿಯಲ್ಲಿ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ಉದಯಗಿರಿ ಠಾಣಾ ಪೊಲೀಸರು ರಾತ್ರಿ ಗಸ್ತನ್ನ ಬಿಗಿಗೊಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *