ಕಾಲುವೆಗೆ ಉರುಳಿಬಿದ್ದ ಟಾಟಾ ಇಂಡಿಕಾ…ನಾಲ್ವರು ಸಾವು…ಬದುಕುಳಿದ ಚಾಲಕ…

ಮಂಡ್ಯ,ಜು30,Tv10 ಕನ್ನಡ

ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಇಂಡಿಕಾ ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕಾಡುಕೊತ್ತನಹಳ್ಳಿ ಸಮೀಪ ನಡೆದಿದೆ. ನಿನ್ನೆ ರಾತ್ರಿ 8:30 ಗಂಟೆ ಸಮಯದಲ್ಲಿ ದುರ್ಘಟನೆ ನಡೆದಿದೆ. ಗಾಮನಹಳ್ಳಿ ಗ್ರಾಮದ ಬನ್ನೂರು ಮಂಡ್ಯ ರಸ್ತೆಯಿಂದ ಗ್ರಾಮದ ನಡುವೆ ಹಾದು ಹೋಗಿರುವ ದೊಡ್ಡ ಮಲಗೂಡು ರಸ್ತೆಯಲ್ಲಿ ಕಾಡುಕೊತ್ತನಹಳ್ಳಿಗೆ ತಿರುಗುವ ವಿಸಿ ನಾಲೆಯ ತಿರುವಿನಲ್ಲಿರುವ ಕಾಲುವೆಗೆ ಕಾರು ಉರುಳಿ ಬಿದ್ದಿದೆ. ಗಾಮನಹಳ್ಳಿ ಗ್ರಾಮದಿಂದ ಬನ್ನೂರು ತಾಲೂಕು ಗೊರವನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ ಟಾಟಾ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಕಾರು ಚಾಲಕ ಮನೋಜ್ ತಕ್ಷಣ ಹೊರಗೆ ಹಾರಿದ ಪರಿಣಾಮ ಪಾರಾಗಿದ್ದಾನೆ. ಕಾರಿನಲ್ಲಿದ್ದ ಗಾಮನಹಳ್ಳಿ ವಾಸಿ ಮಹದೇವಮ್ಮ(60) ಗೊರವನಹಳ್ಳಿ ವಾಸಿಗಳಾದ ರೇಖಾ (40 ) ಮಮತಾ(45) ಹಾಗೂ ಸಂಜನಾ (19) ಮೃತಪಟ್ಟಿದ್ದಾರೆ.ಮೃತರು ಒಂದೇ ಕುಟುಂಬದವರು.
ಮೃತದೇಹಗಳನ್ನ ನೀರಿನಿಂದ ಮೇಲಕ್ಕೆ ಎತ್ತಿದ್ದು ಸ್ಥಳಕ್ಕೆ ಅರಕೆರೆ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *