ಅಯೋಧ್ಯ ರಾಮಮಂದಿರ ಕಟ್ಟಡ ಕಾಮಗಾರಿ…ಮುಸ್ಲಿಂ ಗುತ್ತಿಗೆದಾರರ ಕೈಬಿಡಿ…ಪ್ರಮೋದ್ ಮುತಾಲಿಕ್ ಮನವಿ…

  • Temples
  • August 1, 2023
  • No Comment
  • 210

ಮೈಸೂರು,ಆ1,Tv10 ಕನ್ನಡ

ಶ್ರೀ ರಾಮಚಂದ್ರನ ಜನ್ಮಸ್ಥಳ ಅಯೋಧ್ಯೆ ಮಹಾನಗರಿಯಲ್ಲಿ ಭವ್ಯವಾಗಿ ಮರು ನಿರ್ಮಾಣವಾಗುತ್ತಿರುವ ರಾಮ ಮಂದಿರದ ಕಟ್ಟಡದ ಕೆಲಸಕ್ಕೆ ನೇಮಿಸಿರುವ ಮುಸ್ಲಿಂ ಗುತ್ತಿಗೆದಾರರನ್ನು ಹಾಗೂ ಮುಸ್ಲಿಂ ಕೆಲಸಗಾರರನ್ನು ಕೈಬಿಡುವಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ಬಗ್ಗೆ ಮನವಿ ಶ್ರೀರಾಮ ಜನ್ಮಸ್ಥಳ ರಾಮಮಂದಿರ ನಿರ್ಮಾಣ ಟ್ರಸ್ಟ್ ನ ಸದಸ್ಯರೂ ಹಾಗೂ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರವರಿಗೆ ಎರಡು ಪುಟಗಳ ಮನವಿ ಪತ್ರ ಸಲ್ಲಿಸಿದ್ದಾರೆ.

500 ವರ್ಷಗಳ ಹೋರಾಟದ ನಂತರ ಪವಿತ್ರಸ್ಥಳವನ್ನ ಪಡೆಯಲಾಗಿದೆ.ಪುನರ್ ನಿರ್ಮಾಣ ಕಾರ್ಯ ಆರಂಭವಾಗಿದೆ.ಗರ್ಭಗುಡಿ ನಿರ್ಮಾಣದ ಜವಾಬ್ದಾರಿಯನ್ನ ಮುಸ್ಲಿಂ ಗುತ್ತಿಗೆದಾರರಿಗೆ ನೀಡಿ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿದ ಪ್ರಮೋದ್ ಮುತಾಲಿಕ್ ಕೂಡಲೇ ಮುಸ್ಲಿಂ ಗುತ್ತಿಗೆದಾರರು ಹಾಗೂ ಮುಸ್ಲಿಂ ಕೆಲಸಗಾರರನ್ನ ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಬೆಂಗಳೂರು ಮಹಾನಗರ ಅಧ್ಯಕ್ಷರಾದ ಎಸ್. ಭಾಸ್ಕರ್, ದಕ್ಷಿಣ ವಿಭಾಗದ ಅಧ್ಯಕ್ಷರಾದ ಅಮರ್ ನಾಥ್ ವೈಡಿ, ಮೈಸೂರು ಅಧ್ಯಕ್ಷರಾದ ಸಂಜಯ್, ಹಿಂದೂ ಪರ ಕಾರ್ಯಕರ್ತರಾದ ರಾಕೇಶ್ ಭಟ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಜಗದೀಶ್ ಹೆಬ್ಬಾರ್, ಮಧು ಶಂಕರ್, ಜೀವನ್ ಕುಮಾರ್, ಲೋಹಿತ್ ಇನ್ನಿತರರು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *