ಅಯೋಧ್ಯ ರಾಮಮಂದಿರ ಕಟ್ಟಡ ಕಾಮಗಾರಿ…ಮುಸ್ಲಿಂ ಗುತ್ತಿಗೆದಾರರ ಕೈಬಿಡಿ…ಪ್ರಮೋದ್ ಮುತಾಲಿಕ್ ಮನವಿ…

  • Temples
  • August 1, 2023
  • No Comment
  • 208

ಮೈಸೂರು,ಆ1,Tv10 ಕನ್ನಡ

ಶ್ರೀ ರಾಮಚಂದ್ರನ ಜನ್ಮಸ್ಥಳ ಅಯೋಧ್ಯೆ ಮಹಾನಗರಿಯಲ್ಲಿ ಭವ್ಯವಾಗಿ ಮರು ನಿರ್ಮಾಣವಾಗುತ್ತಿರುವ ರಾಮ ಮಂದಿರದ ಕಟ್ಟಡದ ಕೆಲಸಕ್ಕೆ ನೇಮಿಸಿರುವ ಮುಸ್ಲಿಂ ಗುತ್ತಿಗೆದಾರರನ್ನು ಹಾಗೂ ಮುಸ್ಲಿಂ ಕೆಲಸಗಾರರನ್ನು ಕೈಬಿಡುವಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ಬಗ್ಗೆ ಮನವಿ ಶ್ರೀರಾಮ ಜನ್ಮಸ್ಥಳ ರಾಮಮಂದಿರ ನಿರ್ಮಾಣ ಟ್ರಸ್ಟ್ ನ ಸದಸ್ಯರೂ ಹಾಗೂ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರವರಿಗೆ ಎರಡು ಪುಟಗಳ ಮನವಿ ಪತ್ರ ಸಲ್ಲಿಸಿದ್ದಾರೆ.

500 ವರ್ಷಗಳ ಹೋರಾಟದ ನಂತರ ಪವಿತ್ರಸ್ಥಳವನ್ನ ಪಡೆಯಲಾಗಿದೆ.ಪುನರ್ ನಿರ್ಮಾಣ ಕಾರ್ಯ ಆರಂಭವಾಗಿದೆ.ಗರ್ಭಗುಡಿ ನಿರ್ಮಾಣದ ಜವಾಬ್ದಾರಿಯನ್ನ ಮುಸ್ಲಿಂ ಗುತ್ತಿಗೆದಾರರಿಗೆ ನೀಡಿ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿದ ಪ್ರಮೋದ್ ಮುತಾಲಿಕ್ ಕೂಡಲೇ ಮುಸ್ಲಿಂ ಗುತ್ತಿಗೆದಾರರು ಹಾಗೂ ಮುಸ್ಲಿಂ ಕೆಲಸಗಾರರನ್ನ ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಬೆಂಗಳೂರು ಮಹಾನಗರ ಅಧ್ಯಕ್ಷರಾದ ಎಸ್. ಭಾಸ್ಕರ್, ದಕ್ಷಿಣ ವಿಭಾಗದ ಅಧ್ಯಕ್ಷರಾದ ಅಮರ್ ನಾಥ್ ವೈಡಿ, ಮೈಸೂರು ಅಧ್ಯಕ್ಷರಾದ ಸಂಜಯ್, ಹಿಂದೂ ಪರ ಕಾರ್ಯಕರ್ತರಾದ ರಾಕೇಶ್ ಭಟ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಜಗದೀಶ್ ಹೆಬ್ಬಾರ್, ಮಧು ಶಂಕರ್, ಜೀವನ್ ಕುಮಾರ್, ಲೋಹಿತ್ ಇನ್ನಿತರರು ಹಾಜರಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *