ಅಯೋಧ್ಯ ರಾಮಮಂದಿರ ಕಟ್ಟಡ ಕಾಮಗಾರಿ…ಮುಸ್ಲಿಂ ಗುತ್ತಿಗೆದಾರರ ಕೈಬಿಡಿ…ಪ್ರಮೋದ್ ಮುತಾಲಿಕ್ ಮನವಿ…

  • Temples
  • August 1, 2023
  • No Comment
  • 187

ಮೈಸೂರು,ಆ1,Tv10 ಕನ್ನಡ

ಶ್ರೀ ರಾಮಚಂದ್ರನ ಜನ್ಮಸ್ಥಳ ಅಯೋಧ್ಯೆ ಮಹಾನಗರಿಯಲ್ಲಿ ಭವ್ಯವಾಗಿ ಮರು ನಿರ್ಮಾಣವಾಗುತ್ತಿರುವ ರಾಮ ಮಂದಿರದ ಕಟ್ಟಡದ ಕೆಲಸಕ್ಕೆ ನೇಮಿಸಿರುವ ಮುಸ್ಲಿಂ ಗುತ್ತಿಗೆದಾರರನ್ನು ಹಾಗೂ ಮುಸ್ಲಿಂ ಕೆಲಸಗಾರರನ್ನು ಕೈಬಿಡುವಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ಬಗ್ಗೆ ಮನವಿ ಶ್ರೀರಾಮ ಜನ್ಮಸ್ಥಳ ರಾಮಮಂದಿರ ನಿರ್ಮಾಣ ಟ್ರಸ್ಟ್ ನ ಸದಸ್ಯರೂ ಹಾಗೂ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರವರಿಗೆ ಎರಡು ಪುಟಗಳ ಮನವಿ ಪತ್ರ ಸಲ್ಲಿಸಿದ್ದಾರೆ.

500 ವರ್ಷಗಳ ಹೋರಾಟದ ನಂತರ ಪವಿತ್ರಸ್ಥಳವನ್ನ ಪಡೆಯಲಾಗಿದೆ.ಪುನರ್ ನಿರ್ಮಾಣ ಕಾರ್ಯ ಆರಂಭವಾಗಿದೆ.ಗರ್ಭಗುಡಿ ನಿರ್ಮಾಣದ ಜವಾಬ್ದಾರಿಯನ್ನ ಮುಸ್ಲಿಂ ಗುತ್ತಿಗೆದಾರರಿಗೆ ನೀಡಿ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿದ ಪ್ರಮೋದ್ ಮುತಾಲಿಕ್ ಕೂಡಲೇ ಮುಸ್ಲಿಂ ಗುತ್ತಿಗೆದಾರರು ಹಾಗೂ ಮುಸ್ಲಿಂ ಕೆಲಸಗಾರರನ್ನ ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಬೆಂಗಳೂರು ಮಹಾನಗರ ಅಧ್ಯಕ್ಷರಾದ ಎಸ್. ಭಾಸ್ಕರ್, ದಕ್ಷಿಣ ವಿಭಾಗದ ಅಧ್ಯಕ್ಷರಾದ ಅಮರ್ ನಾಥ್ ವೈಡಿ, ಮೈಸೂರು ಅಧ್ಯಕ್ಷರಾದ ಸಂಜಯ್, ಹಿಂದೂ ಪರ ಕಾರ್ಯಕರ್ತರಾದ ರಾಕೇಶ್ ಭಟ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಜಗದೀಶ್ ಹೆಬ್ಬಾರ್, ಮಧು ಶಂಕರ್, ಜೀವನ್ ಕುಮಾರ್, ಲೋಹಿತ್ ಇನ್ನಿತರರು ಹಾಜರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *