ಅಯೋಧ್ಯ ರಾಮಮಂದಿರ ಕಟ್ಟಡ ಕಾಮಗಾರಿ…ಮುಸ್ಲಿಂ ಗುತ್ತಿಗೆದಾರರ ಕೈಬಿಡಿ…ಪ್ರಮೋದ್ ಮುತಾಲಿಕ್ ಮನವಿ…

  • Temples
  • August 1, 2023
  • No Comment
  • 216

ಮೈಸೂರು,ಆ1,Tv10 ಕನ್ನಡ

ಶ್ರೀ ರಾಮಚಂದ್ರನ ಜನ್ಮಸ್ಥಳ ಅಯೋಧ್ಯೆ ಮಹಾನಗರಿಯಲ್ಲಿ ಭವ್ಯವಾಗಿ ಮರು ನಿರ್ಮಾಣವಾಗುತ್ತಿರುವ ರಾಮ ಮಂದಿರದ ಕಟ್ಟಡದ ಕೆಲಸಕ್ಕೆ ನೇಮಿಸಿರುವ ಮುಸ್ಲಿಂ ಗುತ್ತಿಗೆದಾರರನ್ನು ಹಾಗೂ ಮುಸ್ಲಿಂ ಕೆಲಸಗಾರರನ್ನು ಕೈಬಿಡುವಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ಬಗ್ಗೆ ಮನವಿ ಶ್ರೀರಾಮ ಜನ್ಮಸ್ಥಳ ರಾಮಮಂದಿರ ನಿರ್ಮಾಣ ಟ್ರಸ್ಟ್ ನ ಸದಸ್ಯರೂ ಹಾಗೂ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರವರಿಗೆ ಎರಡು ಪುಟಗಳ ಮನವಿ ಪತ್ರ ಸಲ್ಲಿಸಿದ್ದಾರೆ.

500 ವರ್ಷಗಳ ಹೋರಾಟದ ನಂತರ ಪವಿತ್ರಸ್ಥಳವನ್ನ ಪಡೆಯಲಾಗಿದೆ.ಪುನರ್ ನಿರ್ಮಾಣ ಕಾರ್ಯ ಆರಂಭವಾಗಿದೆ.ಗರ್ಭಗುಡಿ ನಿರ್ಮಾಣದ ಜವಾಬ್ದಾರಿಯನ್ನ ಮುಸ್ಲಿಂ ಗುತ್ತಿಗೆದಾರರಿಗೆ ನೀಡಿ ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿದ ಪ್ರಮೋದ್ ಮುತಾಲಿಕ್ ಕೂಡಲೇ ಮುಸ್ಲಿಂ ಗುತ್ತಿಗೆದಾರರು ಹಾಗೂ ಮುಸ್ಲಿಂ ಕೆಲಸಗಾರರನ್ನ ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಬೆಂಗಳೂರು ಮಹಾನಗರ ಅಧ್ಯಕ್ಷರಾದ ಎಸ್. ಭಾಸ್ಕರ್, ದಕ್ಷಿಣ ವಿಭಾಗದ ಅಧ್ಯಕ್ಷರಾದ ಅಮರ್ ನಾಥ್ ವೈಡಿ, ಮೈಸೂರು ಅಧ್ಯಕ್ಷರಾದ ಸಂಜಯ್, ಹಿಂದೂ ಪರ ಕಾರ್ಯಕರ್ತರಾದ ರಾಕೇಶ್ ಭಟ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಜಗದೀಶ್ ಹೆಬ್ಬಾರ್, ಮಧು ಶಂಕರ್, ಜೀವನ್ ಕುಮಾರ್, ಲೋಹಿತ್ ಇನ್ನಿತರರು ಹಾಜರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *