ಗ್ರಾ.ಪಂ.ಅಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮಾ…ಮತ ಹಾಕುವುದಾಗಿ ಆಣೆ ಪ್ರಮಾಣ ಮಾಡಿ ಕೈ ಕೊಟ್ಟ ಸದಸ್ಯರು…

  • Politics
  • August 3, 2023
  • No Comment
  • 117

ಸಾಲಿಗ್ರಾಮ,ಆ3,Tv10 ಕನ್ನಡ

ಸಾಲಿಗ್ರಾಮ ತಾಲೂಕು ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆದ ಆರೋಪ ಕೇಳಿ ಬಂದಿದೆ.ಮತ ಹಾಕಲು ಪ್ರವಾಸಕ್ಕೆ ಕಳುಹಿಸಿದ್ದ ಅಭ್ಯರ್ಥಿಗೆ ಹಿನ್ನಡೆಯಾಗಿದೆ.ಅಭ್ಯರ್ಥಿಗೆ ಭರವಸೆ ನೀಡಿ ಪ್ರವಾಸ ಮಾಡಿದ ಸದಸ್ಯರು ಕೈ ಕೊಟ್ಟಿದ್ದಾರೆ.
ಪ್ರವಾಸ ಹೋಗಿ ಬಂದು ಎದುರಾಳಿ ಅಭ್ಯರ್ಥಿಗೆ ಮತ ಹಾಕಿದ್ದಾರೆಂದು ಆರೋಪ ಕೇಳಿಬಂದಿದೆ. ಹೈ ಡ್ರಾಮಾಕ್ಕೆ ಸಾಕ್ಷಿಯಾಗಿದೆ ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚುನಾವಣೆ.ಅಧ್ಯಕ್ಷ ಸ್ಥಾನದ ಆಕಾಂಕ್ಷಿ
ಭಾರತಿ ವಿಶ್ವನಾಥ್ ಗೆ 9 ಸದಸ್ಯರು ಮೇಲೂರು ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮತಹಾಕುವುದಾಗಿ ಗ್ಯಾರೆಂಟಿ ನೀಡಿದ್ದರು.ಇದಕ್ಕಾಗಿ ಭಾರತಿ ವಿಶ್ವನಾಥ್ ಪ್ರವಾಸ ವ್ಯವಸ್ಥೆ ಮಾಡಿದ್ದರು.ಆದ್ರೆ ಪ್ರವಾಸದ ನಂತರ ಸದಸ್ಯರು ಉಲ್ಟಾ ಹೊಡೆದರು.ಎದುರಾಳಿ
ವಿಜಯ ರಾಮಕೃಷ್ಣೇಗೌಡ ಗೆಲುವು ಸಾಧಿಸಿದ್ದಾರೆ.
ಒಟ್ಟು 15 ಸದಸ್ಯರ ಗ್ರಾಮ ಪಂಚಾಯತಿ
ಗೆಲ್ಲಲು 9 ಮತಗಳ ಅವಶ್ಯಕತೆ ಇದ್ದ ಕಾರಣ 9 ಜನರಿಗೆ ಭಾರತಿ ವಿಶ್ವನಾಥ್ ಪ್ರವಾಸ ಆಯೋಜಿಸಿದ್ದರು.9 ಸದಸ್ಯರ ಪೈಕಿ
ಮೂವರು ಅಡ್ಡ ಮತದಾನ ಮಾಡಿದ್ದಾರೆ.
ಕೇವಲ 6 ಮತ ಪಡೆದು ಭಾರತಿ ವಿಶ್ವನಾಥ್ ಸೋತಿದ್ದಾರೆ.
ಮತದಾನದ ನಂತರವೂ ಎಲ್ಲರೂ ಸಹ ಮತ್ತೆ ಆಣೆ ಪ್ರಮಾಣ ಮಾಡಿದ್ದಾರೆ.
ಗ್ರಾ.ಪಂ ಸದಸ್ಯರಾದ ಗೌತಮ್,ಲೀಲಾವತಿ, ನರೇಂದ್ರ ಕುಮಾರ್,
ಮಹದೇವಮ್ಮ, ದೀಪಿಕಾ ವೆಂಕಟೇಶ್,
ಪುಟ್ಟಸ್ವಾಮಿ ಗೌಡ, ಕುಳ್ಳಯ್ಯ, ಕುಮಾರ್‌ರಿಂದ ಆಣೆ ಹಾಕಿಸಿಕೊಂಡಿದ್ದಾರೆ.
ಹೈಡ್ರಾಮಕ್ಕೆ ಸಾಕ್ಷಿಯಾದ ಮೇಲೂರು ಗ್ರಾ.ಪಂ ಅಧ್ಯಕ್ಷರ ಚುನಾವಣೆ ಸಾಕ್ಷಿಯಾಗಿದೆ…

#tv10kannada

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *