ಗ್ರಾ.ಪಂ.ಅಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮಾ…ಮತ ಹಾಕುವುದಾಗಿ ಆಣೆ ಪ್ರಮಾಣ ಮಾಡಿ ಕೈ ಕೊಟ್ಟ ಸದಸ್ಯರು…

  • Politics
  • August 3, 2023
  • No Comment
  • 171

ಸಾಲಿಗ್ರಾಮ,ಆ3,Tv10 ಕನ್ನಡ

ಸಾಲಿಗ್ರಾಮ ತಾಲೂಕು ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆದ ಆರೋಪ ಕೇಳಿ ಬಂದಿದೆ.ಮತ ಹಾಕಲು ಪ್ರವಾಸಕ್ಕೆ ಕಳುಹಿಸಿದ್ದ ಅಭ್ಯರ್ಥಿಗೆ ಹಿನ್ನಡೆಯಾಗಿದೆ.ಅಭ್ಯರ್ಥಿಗೆ ಭರವಸೆ ನೀಡಿ ಪ್ರವಾಸ ಮಾಡಿದ ಸದಸ್ಯರು ಕೈ ಕೊಟ್ಟಿದ್ದಾರೆ.
ಪ್ರವಾಸ ಹೋಗಿ ಬಂದು ಎದುರಾಳಿ ಅಭ್ಯರ್ಥಿಗೆ ಮತ ಹಾಕಿದ್ದಾರೆಂದು ಆರೋಪ ಕೇಳಿಬಂದಿದೆ. ಹೈ ಡ್ರಾಮಾಕ್ಕೆ ಸಾಕ್ಷಿಯಾಗಿದೆ ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚುನಾವಣೆ.ಅಧ್ಯಕ್ಷ ಸ್ಥಾನದ ಆಕಾಂಕ್ಷಿ
ಭಾರತಿ ವಿಶ್ವನಾಥ್ ಗೆ 9 ಸದಸ್ಯರು ಮೇಲೂರು ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮತಹಾಕುವುದಾಗಿ ಗ್ಯಾರೆಂಟಿ ನೀಡಿದ್ದರು.ಇದಕ್ಕಾಗಿ ಭಾರತಿ ವಿಶ್ವನಾಥ್ ಪ್ರವಾಸ ವ್ಯವಸ್ಥೆ ಮಾಡಿದ್ದರು.ಆದ್ರೆ ಪ್ರವಾಸದ ನಂತರ ಸದಸ್ಯರು ಉಲ್ಟಾ ಹೊಡೆದರು.ಎದುರಾಳಿ
ವಿಜಯ ರಾಮಕೃಷ್ಣೇಗೌಡ ಗೆಲುವು ಸಾಧಿಸಿದ್ದಾರೆ.
ಒಟ್ಟು 15 ಸದಸ್ಯರ ಗ್ರಾಮ ಪಂಚಾಯತಿ
ಗೆಲ್ಲಲು 9 ಮತಗಳ ಅವಶ್ಯಕತೆ ಇದ್ದ ಕಾರಣ 9 ಜನರಿಗೆ ಭಾರತಿ ವಿಶ್ವನಾಥ್ ಪ್ರವಾಸ ಆಯೋಜಿಸಿದ್ದರು.9 ಸದಸ್ಯರ ಪೈಕಿ
ಮೂವರು ಅಡ್ಡ ಮತದಾನ ಮಾಡಿದ್ದಾರೆ.
ಕೇವಲ 6 ಮತ ಪಡೆದು ಭಾರತಿ ವಿಶ್ವನಾಥ್ ಸೋತಿದ್ದಾರೆ.
ಮತದಾನದ ನಂತರವೂ ಎಲ್ಲರೂ ಸಹ ಮತ್ತೆ ಆಣೆ ಪ್ರಮಾಣ ಮಾಡಿದ್ದಾರೆ.
ಗ್ರಾ.ಪಂ ಸದಸ್ಯರಾದ ಗೌತಮ್,ಲೀಲಾವತಿ, ನರೇಂದ್ರ ಕುಮಾರ್,
ಮಹದೇವಮ್ಮ, ದೀಪಿಕಾ ವೆಂಕಟೇಶ್,
ಪುಟ್ಟಸ್ವಾಮಿ ಗೌಡ, ಕುಳ್ಳಯ್ಯ, ಕುಮಾರ್‌ರಿಂದ ಆಣೆ ಹಾಕಿಸಿಕೊಂಡಿದ್ದಾರೆ.
ಹೈಡ್ರಾಮಕ್ಕೆ ಸಾಕ್ಷಿಯಾದ ಮೇಲೂರು ಗ್ರಾ.ಪಂ ಅಧ್ಯಕ್ಷರ ಚುನಾವಣೆ ಸಾಕ್ಷಿಯಾಗಿದೆ…

#tv10kannada

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *