ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ…2.5 ಲಕ್ಷ ಮೌಲ್ಯದ 4 ಬೈಕ್ ವಶ…

  • Crime
  • August 3, 2023
  • No Comment
  • 250

ಮೈಸೂರು,ಆ3,Tv10 ಕನ್ನಡ

ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳುವು ಮಾಡುತ್ತಿದ್ದ ಇಬ್ಬರು ಯುವಕರನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 2.5 ಲಕ್ಷ ಮೌಲ್ಯದ 4 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಧನುಷ್ (19) ಹಾಗೂ ನಿತಿನ್ (19) ಬಂಧಿತರು.

ಮೈಸೂರಿನ ಶ್ರೀರಾಂಪುರದಲ್ಲಿ ಹೀರೋ ಹೋಂಡಾ ಸಿಡಿ ಡಾನ್ ಬೈಕ್ ಕಳುವು ಮಾಡಿ ಅದೇ ಬೈಕ್ ನಲ್ಲಿ ಮತ್ತೊಂದು ಬೈಕ್ ಕಳುವು ಮಾಡಲು ಸಂಚು ಹಾಕುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದಾಗ ವ್ಹೀಲಿಂಗ್ ಶೋಕಿಗಾಗಿ ಬೈಕ್ ಗಳನ್ನ ಕಳುವು ಮಾಡುತ್ತಿದ್ದುದಾಗಿ ತಿಳಿಸಿದ್ದಾರೆ.

ವಿದ್ಯಾರಣ್ಯಪುರಂ ಠಾಣೆ,ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಕಳುವು ಪ್ರಕರಣ ಹಾಗೂ ಆಲನಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳು ಪತ್ತೆಯಾಗಿದೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಕು.ರಾಧಾ,ಗೋಪಾಲ್ ಹಾಗೂ ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಪುಟ್ಟಪ್ಪ,ಹಜರತ್,ಸುರೇಶ್,ನಾಗೇಶ್,ಯೋಗೇಶ್,ಸತೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಡಾ.ಬಿರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಯ ಡಿಸಿಪಿ ಮುತ್ತುರಾಜ್ ರವರು ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ..

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *