ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ…2.5 ಲಕ್ಷ ಮೌಲ್ಯದ 4 ಬೈಕ್ ವಶ…

  • Crime
  • August 3, 2023
  • No Comment
  • 215

ಮೈಸೂರು,ಆ3,Tv10 ಕನ್ನಡ

ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳುವು ಮಾಡುತ್ತಿದ್ದ ಇಬ್ಬರು ಯುವಕರನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 2.5 ಲಕ್ಷ ಮೌಲ್ಯದ 4 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಧನುಷ್ (19) ಹಾಗೂ ನಿತಿನ್ (19) ಬಂಧಿತರು.

ಮೈಸೂರಿನ ಶ್ರೀರಾಂಪುರದಲ್ಲಿ ಹೀರೋ ಹೋಂಡಾ ಸಿಡಿ ಡಾನ್ ಬೈಕ್ ಕಳುವು ಮಾಡಿ ಅದೇ ಬೈಕ್ ನಲ್ಲಿ ಮತ್ತೊಂದು ಬೈಕ್ ಕಳುವು ಮಾಡಲು ಸಂಚು ಹಾಕುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದಾಗ ವ್ಹೀಲಿಂಗ್ ಶೋಕಿಗಾಗಿ ಬೈಕ್ ಗಳನ್ನ ಕಳುವು ಮಾಡುತ್ತಿದ್ದುದಾಗಿ ತಿಳಿಸಿದ್ದಾರೆ.

ವಿದ್ಯಾರಣ್ಯಪುರಂ ಠಾಣೆ,ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಕಳುವು ಪ್ರಕರಣ ಹಾಗೂ ಆಲನಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳು ಪತ್ತೆಯಾಗಿದೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಕು.ರಾಧಾ,ಗೋಪಾಲ್ ಹಾಗೂ ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಪುಟ್ಟಪ್ಪ,ಹಜರತ್,ಸುರೇಶ್,ನಾಗೇಶ್,ಯೋಗೇಶ್,ಸತೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಡಾ.ಬಿರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಯ ಡಿಸಿಪಿ ಮುತ್ತುರಾಜ್ ರವರು ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ..

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *