ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ…2.5 ಲಕ್ಷ ಮೌಲ್ಯದ 4 ಬೈಕ್ ವಶ…

  • Crime
  • August 3, 2023
  • No Comment
  • 257

ಮೈಸೂರು,ಆ3,Tv10 ಕನ್ನಡ

ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳುವು ಮಾಡುತ್ತಿದ್ದ ಇಬ್ಬರು ಯುವಕರನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 2.5 ಲಕ್ಷ ಮೌಲ್ಯದ 4 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಧನುಷ್ (19) ಹಾಗೂ ನಿತಿನ್ (19) ಬಂಧಿತರು.

ಮೈಸೂರಿನ ಶ್ರೀರಾಂಪುರದಲ್ಲಿ ಹೀರೋ ಹೋಂಡಾ ಸಿಡಿ ಡಾನ್ ಬೈಕ್ ಕಳುವು ಮಾಡಿ ಅದೇ ಬೈಕ್ ನಲ್ಲಿ ಮತ್ತೊಂದು ಬೈಕ್ ಕಳುವು ಮಾಡಲು ಸಂಚು ಹಾಕುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದಾಗ ವ್ಹೀಲಿಂಗ್ ಶೋಕಿಗಾಗಿ ಬೈಕ್ ಗಳನ್ನ ಕಳುವು ಮಾಡುತ್ತಿದ್ದುದಾಗಿ ತಿಳಿಸಿದ್ದಾರೆ.

ವಿದ್ಯಾರಣ್ಯಪುರಂ ಠಾಣೆ,ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಕಳುವು ಪ್ರಕರಣ ಹಾಗೂ ಆಲನಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳು ಪತ್ತೆಯಾಗಿದೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಕು.ರಾಧಾ,ಗೋಪಾಲ್ ಹಾಗೂ ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಪುಟ್ಟಪ್ಪ,ಹಜರತ್,ಸುರೇಶ್,ನಾಗೇಶ್,ಯೋಗೇಶ್,ಸತೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಡಾ.ಬಿರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಯ ಡಿಸಿಪಿ ಮುತ್ತುರಾಜ್ ರವರು ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ..

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *