ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ…2.5 ಲಕ್ಷ ಮೌಲ್ಯದ 4 ಬೈಕ್ ವಶ…

  • Crime
  • August 3, 2023
  • No Comment
  • 276

ಮೈಸೂರು,ಆ3,Tv10 ಕನ್ನಡ

ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳುವು ಮಾಡುತ್ತಿದ್ದ ಇಬ್ಬರು ಯುವಕರನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 2.5 ಲಕ್ಷ ಮೌಲ್ಯದ 4 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಧನುಷ್ (19) ಹಾಗೂ ನಿತಿನ್ (19) ಬಂಧಿತರು.

ಮೈಸೂರಿನ ಶ್ರೀರಾಂಪುರದಲ್ಲಿ ಹೀರೋ ಹೋಂಡಾ ಸಿಡಿ ಡಾನ್ ಬೈಕ್ ಕಳುವು ಮಾಡಿ ಅದೇ ಬೈಕ್ ನಲ್ಲಿ ಮತ್ತೊಂದು ಬೈಕ್ ಕಳುವು ಮಾಡಲು ಸಂಚು ಹಾಕುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದಾಗ ವ್ಹೀಲಿಂಗ್ ಶೋಕಿಗಾಗಿ ಬೈಕ್ ಗಳನ್ನ ಕಳುವು ಮಾಡುತ್ತಿದ್ದುದಾಗಿ ತಿಳಿಸಿದ್ದಾರೆ.

ವಿದ್ಯಾರಣ್ಯಪುರಂ ಠಾಣೆ,ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಕಳುವು ಪ್ರಕರಣ ಹಾಗೂ ಆಲನಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳು ಪತ್ತೆಯಾಗಿದೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಕು.ರಾಧಾ,ಗೋಪಾಲ್ ಹಾಗೂ ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಪುಟ್ಟಪ್ಪ,ಹಜರತ್,ಸುರೇಶ್,ನಾಗೇಶ್,ಯೋಗೇಶ್,ಸತೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಡಾ.ಬಿರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಯ ಡಿಸಿಪಿ ಮುತ್ತುರಾಜ್ ರವರು ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *