ಜಮೀನು ವಿಚಾರದಲ್ಲಿ ಕಿರಿಕ್…ಅವಮಾನ ತಾಳದೆ ರೈತ ಆತ್ಮಹತ್ಯೆ..ಮೂವರ ವಿರುದ್ದ FIR ದಾಖಲು…

  • Crime
  • August 6, 2023
  • No Comment
  • 157

ಹುಣಸೂರು,ಆ6,Tv10 ಕನ್ನಡ

ಜಮೀನು ವಿಚಾರದಲ್ಲಿ ಗಲಾಟೆ ಮಾಡಿದ ಮೂವರು ವ್ಯಕ್ತಿಗಳು ರೈತರೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ ಘಟನೆ ಹುಣಸೂರು ತಾಲೂಕಿನ ಕುಡಿನೀರಿನ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಅವಮಾನ ತಾಳದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿದೆ.

ಗುರುರಾವ್ ಭಾಂಗೆ ಆತ್ಮಹತ್ಯೆ ಮಾಡಿಕೊಂಡ ರೈತ.ಹುಣಸೂರಿನ ತರೀಕಲ್ ಕಾವಲಿ ಗ್ರಾಮದಲ್ಲಿ ಗುರುರಾವ್ ಭಾಂಗೆ ರವರಿಗೆ ಸೇರಿದ 2 ಎಕ್ರೆ 5 ಗುಂಟೆ ಜಮೀನಿದೆ.ಪಕ್ಕದ ಜಮೀನಿನವರಾದ ಮಹೇಶ್ ಇವರ ಪತ್ನಿ ಸಾಕಮ್ಮ ಹಾಗೂ ಪುತ್ರ ರಂಜನ್ ಜಮೀನು ವಿಚಾರದಲ್ಲಿ ಕಿರಿಕ್ ಮಾಡಿದ್ದಾರೆ.ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.ಹೀಗಿದ್ದೂ ಗುರುರಾವ್ ಭಾಂಗೆ ವಿರುದ್ದ ಹುಣಸೂರು ಪೊಲೀಸ್ ಠಾಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಿದ್ದಾರೆ.ಇದಕ್ಕೆ ಪ್ರತ್ಯುತ್ತರವಾಗಿ ಗುರುರಾವ್ ಭಾಂಗೆ ಸಹ ದೂರು ದಾಖಲಿಸಿದ್ದಾರೆ.ಈ ಬೆಳವಣಿಗೆಯಿಂದ ಆಗಸ್ಟ್ 4 ರಂದು ಗುರುರಾವ್ ಭಾಂಗೆ ರವರನ್ನ ಮಹೇಶ್,ಸಾಕಮ್ಮ,ರಂಜನ್ ರವರು ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ.ಇದರಿಂದ ಮನನೊಂದ ಗುರುರಾವ್ ಭಾಂಗೆ ಮಗನಿಗೆ ಫೋನ್ ಮಾಡಿ ನನ್ನ ಸಾವಿಗೆ ಮಹೇಶ್,ಸಾಕಮ್ಮ,ರಂಜನ್ ಕಾರಣ ಎಂದು ತಿಳಿಸಿ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *