ಜಮೀನು ವಿಚಾರದಲ್ಲಿ ಕಿರಿಕ್…ಅವಮಾನ ತಾಳದೆ ರೈತ ಆತ್ಮಹತ್ಯೆ..ಮೂವರ ವಿರುದ್ದ FIR ದಾಖಲು…

  • Crime
  • August 6, 2023
  • No Comment
  • 169

ಹುಣಸೂರು,ಆ6,Tv10 ಕನ್ನಡ

ಜಮೀನು ವಿಚಾರದಲ್ಲಿ ಗಲಾಟೆ ಮಾಡಿದ ಮೂವರು ವ್ಯಕ್ತಿಗಳು ರೈತರೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ ಘಟನೆ ಹುಣಸೂರು ತಾಲೂಕಿನ ಕುಡಿನೀರಿನ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಅವಮಾನ ತಾಳದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿದೆ.

ಗುರುರಾವ್ ಭಾಂಗೆ ಆತ್ಮಹತ್ಯೆ ಮಾಡಿಕೊಂಡ ರೈತ.ಹುಣಸೂರಿನ ತರೀಕಲ್ ಕಾವಲಿ ಗ್ರಾಮದಲ್ಲಿ ಗುರುರಾವ್ ಭಾಂಗೆ ರವರಿಗೆ ಸೇರಿದ 2 ಎಕ್ರೆ 5 ಗುಂಟೆ ಜಮೀನಿದೆ.ಪಕ್ಕದ ಜಮೀನಿನವರಾದ ಮಹೇಶ್ ಇವರ ಪತ್ನಿ ಸಾಕಮ್ಮ ಹಾಗೂ ಪುತ್ರ ರಂಜನ್ ಜಮೀನು ವಿಚಾರದಲ್ಲಿ ಕಿರಿಕ್ ಮಾಡಿದ್ದಾರೆ.ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.ಹೀಗಿದ್ದೂ ಗುರುರಾವ್ ಭಾಂಗೆ ವಿರುದ್ದ ಹುಣಸೂರು ಪೊಲೀಸ್ ಠಾಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಿದ್ದಾರೆ.ಇದಕ್ಕೆ ಪ್ರತ್ಯುತ್ತರವಾಗಿ ಗುರುರಾವ್ ಭಾಂಗೆ ಸಹ ದೂರು ದಾಖಲಿಸಿದ್ದಾರೆ.ಈ ಬೆಳವಣಿಗೆಯಿಂದ ಆಗಸ್ಟ್ 4 ರಂದು ಗುರುರಾವ್ ಭಾಂಗೆ ರವರನ್ನ ಮಹೇಶ್,ಸಾಕಮ್ಮ,ರಂಜನ್ ರವರು ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ.ಇದರಿಂದ ಮನನೊಂದ ಗುರುರಾವ್ ಭಾಂಗೆ ಮಗನಿಗೆ ಫೋನ್ ಮಾಡಿ ನನ್ನ ಸಾವಿಗೆ ಮಹೇಶ್,ಸಾಕಮ್ಮ,ರಂಜನ್ ಕಾರಣ ಎಂದು ತಿಳಿಸಿ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *