ಜಮೀನು ವಿಚಾರದಲ್ಲಿ ಕಿರಿಕ್…ಅವಮಾನ ತಾಳದೆ ರೈತ ಆತ್ಮಹತ್ಯೆ..ಮೂವರ ವಿರುದ್ದ FIR ದಾಖಲು…

  • Crime
  • August 6, 2023
  • No Comment
  • 174

ಹುಣಸೂರು,ಆ6,Tv10 ಕನ್ನಡ

ಜಮೀನು ವಿಚಾರದಲ್ಲಿ ಗಲಾಟೆ ಮಾಡಿದ ಮೂವರು ವ್ಯಕ್ತಿಗಳು ರೈತರೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ ಘಟನೆ ಹುಣಸೂರು ತಾಲೂಕಿನ ಕುಡಿನೀರಿನ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಅವಮಾನ ತಾಳದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿದೆ.

ಗುರುರಾವ್ ಭಾಂಗೆ ಆತ್ಮಹತ್ಯೆ ಮಾಡಿಕೊಂಡ ರೈತ.ಹುಣಸೂರಿನ ತರೀಕಲ್ ಕಾವಲಿ ಗ್ರಾಮದಲ್ಲಿ ಗುರುರಾವ್ ಭಾಂಗೆ ರವರಿಗೆ ಸೇರಿದ 2 ಎಕ್ರೆ 5 ಗುಂಟೆ ಜಮೀನಿದೆ.ಪಕ್ಕದ ಜಮೀನಿನವರಾದ ಮಹೇಶ್ ಇವರ ಪತ್ನಿ ಸಾಕಮ್ಮ ಹಾಗೂ ಪುತ್ರ ರಂಜನ್ ಜಮೀನು ವಿಚಾರದಲ್ಲಿ ಕಿರಿಕ್ ಮಾಡಿದ್ದಾರೆ.ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.ಹೀಗಿದ್ದೂ ಗುರುರಾವ್ ಭಾಂಗೆ ವಿರುದ್ದ ಹುಣಸೂರು ಪೊಲೀಸ್ ಠಾಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಿದ್ದಾರೆ.ಇದಕ್ಕೆ ಪ್ರತ್ಯುತ್ತರವಾಗಿ ಗುರುರಾವ್ ಭಾಂಗೆ ಸಹ ದೂರು ದಾಖಲಿಸಿದ್ದಾರೆ.ಈ ಬೆಳವಣಿಗೆಯಿಂದ ಆಗಸ್ಟ್ 4 ರಂದು ಗುರುರಾವ್ ಭಾಂಗೆ ರವರನ್ನ ಮಹೇಶ್,ಸಾಕಮ್ಮ,ರಂಜನ್ ರವರು ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ.ಇದರಿಂದ ಮನನೊಂದ ಗುರುರಾವ್ ಭಾಂಗೆ ಮಗನಿಗೆ ಫೋನ್ ಮಾಡಿ ನನ್ನ ಸಾವಿಗೆ ಮಹೇಶ್,ಸಾಕಮ್ಮ,ರಂಜನ್ ಕಾರಣ ಎಂದು ತಿಳಿಸಿ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *