ಜಮೀನು ವಿಚಾರದಲ್ಲಿ ಕಿರಿಕ್…ಅವಮಾನ ತಾಳದೆ ರೈತ ಆತ್ಮಹತ್ಯೆ..ಮೂವರ ವಿರುದ್ದ FIR ದಾಖಲು…

  • Crime
  • August 6, 2023
  • No Comment
  • 191

ಹುಣಸೂರು,ಆ6,Tv10 ಕನ್ನಡ

ಜಮೀನು ವಿಚಾರದಲ್ಲಿ ಗಲಾಟೆ ಮಾಡಿದ ಮೂವರು ವ್ಯಕ್ತಿಗಳು ರೈತರೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ ಘಟನೆ ಹುಣಸೂರು ತಾಲೂಕಿನ ಕುಡಿನೀರಿನ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಅವಮಾನ ತಾಳದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿದೆ.

ಗುರುರಾವ್ ಭಾಂಗೆ ಆತ್ಮಹತ್ಯೆ ಮಾಡಿಕೊಂಡ ರೈತ.ಹುಣಸೂರಿನ ತರೀಕಲ್ ಕಾವಲಿ ಗ್ರಾಮದಲ್ಲಿ ಗುರುರಾವ್ ಭಾಂಗೆ ರವರಿಗೆ ಸೇರಿದ 2 ಎಕ್ರೆ 5 ಗುಂಟೆ ಜಮೀನಿದೆ.ಪಕ್ಕದ ಜಮೀನಿನವರಾದ ಮಹೇಶ್ ಇವರ ಪತ್ನಿ ಸಾಕಮ್ಮ ಹಾಗೂ ಪುತ್ರ ರಂಜನ್ ಜಮೀನು ವಿಚಾರದಲ್ಲಿ ಕಿರಿಕ್ ಮಾಡಿದ್ದಾರೆ.ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.ಹೀಗಿದ್ದೂ ಗುರುರಾವ್ ಭಾಂಗೆ ವಿರುದ್ದ ಹುಣಸೂರು ಪೊಲೀಸ್ ಠಾಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಿದ್ದಾರೆ.ಇದಕ್ಕೆ ಪ್ರತ್ಯುತ್ತರವಾಗಿ ಗುರುರಾವ್ ಭಾಂಗೆ ಸಹ ದೂರು ದಾಖಲಿಸಿದ್ದಾರೆ.ಈ ಬೆಳವಣಿಗೆಯಿಂದ ಆಗಸ್ಟ್ 4 ರಂದು ಗುರುರಾವ್ ಭಾಂಗೆ ರವರನ್ನ ಮಹೇಶ್,ಸಾಕಮ್ಮ,ರಂಜನ್ ರವರು ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ.ಇದರಿಂದ ಮನನೊಂದ ಗುರುರಾವ್ ಭಾಂಗೆ ಮಗನಿಗೆ ಫೋನ್ ಮಾಡಿ ನನ್ನ ಸಾವಿಗೆ ಮಹೇಶ್,ಸಾಕಮ್ಮ,ರಂಜನ್ ಕಾರಣ ಎಂದು ತಿಳಿಸಿ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *