ಜಮೀನು ವಿಚಾರದಲ್ಲಿ ಕಿರಿಕ್…ಅವಮಾನ ತಾಳದೆ ರೈತ ಆತ್ಮಹತ್ಯೆ..ಮೂವರ ವಿರುದ್ದ FIR ದಾಖಲು…

  • Crime
  • August 6, 2023
  • No Comment
  • 134

ಹುಣಸೂರು,ಆ6,Tv10 ಕನ್ನಡ

ಜಮೀನು ವಿಚಾರದಲ್ಲಿ ಗಲಾಟೆ ಮಾಡಿದ ಮೂವರು ವ್ಯಕ್ತಿಗಳು ರೈತರೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ ಘಟನೆ ಹುಣಸೂರು ತಾಲೂಕಿನ ಕುಡಿನೀರಿನ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಅವಮಾನ ತಾಳದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿದೆ.

ಗುರುರಾವ್ ಭಾಂಗೆ ಆತ್ಮಹತ್ಯೆ ಮಾಡಿಕೊಂಡ ರೈತ.ಹುಣಸೂರಿನ ತರೀಕಲ್ ಕಾವಲಿ ಗ್ರಾಮದಲ್ಲಿ ಗುರುರಾವ್ ಭಾಂಗೆ ರವರಿಗೆ ಸೇರಿದ 2 ಎಕ್ರೆ 5 ಗುಂಟೆ ಜಮೀನಿದೆ.ಪಕ್ಕದ ಜಮೀನಿನವರಾದ ಮಹೇಶ್ ಇವರ ಪತ್ನಿ ಸಾಕಮ್ಮ ಹಾಗೂ ಪುತ್ರ ರಂಜನ್ ಜಮೀನು ವಿಚಾರದಲ್ಲಿ ಕಿರಿಕ್ ಮಾಡಿದ್ದಾರೆ.ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.ಹೀಗಿದ್ದೂ ಗುರುರಾವ್ ಭಾಂಗೆ ವಿರುದ್ದ ಹುಣಸೂರು ಪೊಲೀಸ್ ಠಾಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಿದ್ದಾರೆ.ಇದಕ್ಕೆ ಪ್ರತ್ಯುತ್ತರವಾಗಿ ಗುರುರಾವ್ ಭಾಂಗೆ ಸಹ ದೂರು ದಾಖಲಿಸಿದ್ದಾರೆ.ಈ ಬೆಳವಣಿಗೆಯಿಂದ ಆಗಸ್ಟ್ 4 ರಂದು ಗುರುರಾವ್ ಭಾಂಗೆ ರವರನ್ನ ಮಹೇಶ್,ಸಾಕಮ್ಮ,ರಂಜನ್ ರವರು ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ.ಇದರಿಂದ ಮನನೊಂದ ಗುರುರಾವ್ ಭಾಂಗೆ ಮಗನಿಗೆ ಫೋನ್ ಮಾಡಿ ನನ್ನ ಸಾವಿಗೆ ಮಹೇಶ್,ಸಾಕಮ್ಮ,ರಂಜನ್ ಕಾರಣ ಎಂದು ತಿಳಿಸಿ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *