ಬೈಲುಕುಪ್ಪೆ 1 ನೇ ಟಿಬೆಟ್ ಕ್ಯಾಂಪ್ ಆವರಣದಲ್ಲಿ 29 ಕೆ.ಜಿ.ಗಾಂಜಾ ವಶ…ಐವರ ಬಂಧನ…

  • Crime
  • August 8, 2023
  • No Comment
  • 177

ಪಿರಿಯಾಪಟ್ಟಣ,ಆ8,Tv10 ಕನ್ನಡ

ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ ಬಂಧಿಸಿದ್ದಾರೆ.ಇಂದು
ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ
29 ಕೆ.ಜಿ. ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿರುವುದಾಗಿ ಮೈಸೂರು ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕಾರ್ ತಿಳಿಸಿದ್ದಾರೆ. ಬೈಲುಕುಪ್ಪೆ ಪೊಲೀಸ್ ಠಾಣೆಯ ಪೊಲೀಸ್ ಮೈದಾನದಲ್ಲಿ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಹಾಗೂ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ. ಒಡಿಸ್ಸಾ ರಾಜ್ಯದ ಬಿಕ್ರಂ ನಾಯಕ್, ಕುಶಾಲನಗರದ ನಯನ್ ದೀಪು , ಮಡಿಕೇರಿ ತಾಲೂಕು ಕಡಕದಾಳು ಗ್ರಾಮದ ಜಂಶೀರ್ , ಪಿರಿಯಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದ ಅನಿಲ್ ಕುಮಾರ್, ಕೊಪ್ಪ ಗುಡ್ಡನಹಳ್ಳಿ ಗ್ರಾಮದ ಭರತ್ ಕುಮಾರ್ ರವರನ್ನ ಬಂಧಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಹುಣಸೂರು ಡಿವೈಎಸ್ಪಿ ಮಹೇಶ್, ಬೈಲುಕೊಪ್ಪೆ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್ಐ ಅಜಯ್ ಕುಮಾರ್ ಹಾಜರಿದ್ದರು.
ಕಾರ್ಯಾಚರಣೆಯಲ್ಲಿ ಬೈಲುಕೊಪ್ಪ ಪೊಲೀಸ್ ಠಾಣೆಯ, ಪಿಎಸ್ಐ ಅಜಯ್ ಕುಮಾರ್ , ಅಪರಾಧ ವಿಭಾಗದ ಪಿಎಸ್ಐ ಮಾಲಿಂಗಯ್ಯ, ಸಿಬ್ಬಂದಿಗಳಾದ ಅಜಯ್ ಕುಮಾರ್, ಚೇತನ್ ಕುಮಾರ್,ಮುದ್ದುರಾಜ್, ಕುಮಾರಸ್ವಾಮಿ, ರವಿ, ವೀರೇಶ್ ಕೆ.ಹೆಮಹದೇವಪ್ಪ, ರವಿ ಕುಮಾರ್, ಸುರೇಶ್, ರಾಜೇಶ್ , ಭಾಗವಹಿಸಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *