ಬೈಲುಕುಪ್ಪೆ 1 ನೇ ಟಿಬೆಟ್ ಕ್ಯಾಂಪ್ ಆವರಣದಲ್ಲಿ 29 ಕೆ.ಜಿ.ಗಾಂಜಾ ವಶ…ಐವರ ಬಂಧನ…

  • Crime
  • August 8, 2023
  • No Comment
  • 178

ಪಿರಿಯಾಪಟ್ಟಣ,ಆ8,Tv10 ಕನ್ನಡ

ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ ಬಂಧಿಸಿದ್ದಾರೆ.ಇಂದು
ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ
29 ಕೆ.ಜಿ. ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿರುವುದಾಗಿ ಮೈಸೂರು ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕಾರ್ ತಿಳಿಸಿದ್ದಾರೆ. ಬೈಲುಕುಪ್ಪೆ ಪೊಲೀಸ್ ಠಾಣೆಯ ಪೊಲೀಸ್ ಮೈದಾನದಲ್ಲಿ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಹಾಗೂ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ. ಒಡಿಸ್ಸಾ ರಾಜ್ಯದ ಬಿಕ್ರಂ ನಾಯಕ್, ಕುಶಾಲನಗರದ ನಯನ್ ದೀಪು , ಮಡಿಕೇರಿ ತಾಲೂಕು ಕಡಕದಾಳು ಗ್ರಾಮದ ಜಂಶೀರ್ , ಪಿರಿಯಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದ ಅನಿಲ್ ಕುಮಾರ್, ಕೊಪ್ಪ ಗುಡ್ಡನಹಳ್ಳಿ ಗ್ರಾಮದ ಭರತ್ ಕುಮಾರ್ ರವರನ್ನ ಬಂಧಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಹುಣಸೂರು ಡಿವೈಎಸ್ಪಿ ಮಹೇಶ್, ಬೈಲುಕೊಪ್ಪೆ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್ಐ ಅಜಯ್ ಕುಮಾರ್ ಹಾಜರಿದ್ದರು.
ಕಾರ್ಯಾಚರಣೆಯಲ್ಲಿ ಬೈಲುಕೊಪ್ಪ ಪೊಲೀಸ್ ಠಾಣೆಯ, ಪಿಎಸ್ಐ ಅಜಯ್ ಕುಮಾರ್ , ಅಪರಾಧ ವಿಭಾಗದ ಪಿಎಸ್ಐ ಮಾಲಿಂಗಯ್ಯ, ಸಿಬ್ಬಂದಿಗಳಾದ ಅಜಯ್ ಕುಮಾರ್, ಚೇತನ್ ಕುಮಾರ್,ಮುದ್ದುರಾಜ್, ಕುಮಾರಸ್ವಾಮಿ, ರವಿ, ವೀರೇಶ್ ಕೆ.ಹೆಮಹದೇವಪ್ಪ, ರವಿ ಕುಮಾರ್, ಸುರೇಶ್, ರಾಜೇಶ್ , ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *