ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ಮೈಸೂರು,ಆ11,Tv10 ಕನ್ನಡ

ರಾತ್ರಿ ಗಸ್ತಿಗೆ ಇನ್ಮುಂದು ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ.ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನ ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳ ರಾತ್ರಿ ಗಸ್ತಿನ ಕಾರ್ಯ ಆರಂಭವಾಗಿದೆ.ಸಧ್ಯ ಮೊದಲ ಹಂತದಲ್ಲಿ ಈ ಕಾರ್ಯಕ್ಕೆ ಹತ್ತು ಮಹಿಳಾ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ.ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ತಕ್ಕಂತೆ ಮತ್ತಷ್ಟು ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.ಮೃಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿದೆ.ಮಹಿಳೆಯರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ರಕ್ಷಣೆ ಒದಗಿಸಲು ಮೈಸೂರು ಖಾಕಿ ಪಡೆ ಆಧ್ಯತೆ ನೀಡಿದೆ.ಶಂಕಿತ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಿ ಅವರ ಸಂಪೂರ್ಣ ಮಾಹಿತಿ ಪಡೆಯುವ ಕೆಲಸ ಮಹಿಳಾ ಸಿಬ್ಬಂದಿಗಳು ರಾತ್ರಿಪಾಳಿ ಗಸ್ತಿನಲ್ಲಿ ಮಾಡುತ್ತಾರೆ.ಕೇವಲ ಪುರುಷ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿದ್ದ ರಾತ್ರಿ ಗಸ್ತಿನ ಜವಾಬ್ದಾರಿಯನ್ನ ಮಹಿಳೆಯರೂ ಹೆಗಲ ಮೇಲೆ ಹೊತ್ತಿರುವ ನಡೆ ನಿಜಕ್ಕೂ ಶ್ಲಾಘನೀಯ.ಮುಂದಿನ ದಿನಗಳಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಈ ವ್ಯವಸ್ಥೆ ಕಾರ್ಯರೂಪಕ್ಕೆ ತರುವ ಯೋಜನೆ ಇದೆ.ಸಾಂಸ್ಕೃತಿಕ ನಗರಿಯ ನಾಗರೀಕರಿಗೆ ಒಂದಿಲ್ಲ ಒಂದು ರೀತಿಯಲ್ಲಿ ಅಭಯ ನೀಡುತ್ತಿರುವ ಮೈಸೂರು ಪೊಲೀಸರಿಗೆ ಮೆಚ್ಚುಗೆ ವ್ಯಕ್ತವಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *