ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ಮೈಸೂರು,ಆ11,Tv10 ಕನ್ನಡ

ರಾತ್ರಿ ಗಸ್ತಿಗೆ ಇನ್ಮುಂದು ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ.ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನ ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳ ರಾತ್ರಿ ಗಸ್ತಿನ ಕಾರ್ಯ ಆರಂಭವಾಗಿದೆ.ಸಧ್ಯ ಮೊದಲ ಹಂತದಲ್ಲಿ ಈ ಕಾರ್ಯಕ್ಕೆ ಹತ್ತು ಮಹಿಳಾ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ.ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ತಕ್ಕಂತೆ ಮತ್ತಷ್ಟು ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.ಮೃಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿದೆ.ಮಹಿಳೆಯರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ರಕ್ಷಣೆ ಒದಗಿಸಲು ಮೈಸೂರು ಖಾಕಿ ಪಡೆ ಆಧ್ಯತೆ ನೀಡಿದೆ.ಶಂಕಿತ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಿ ಅವರ ಸಂಪೂರ್ಣ ಮಾಹಿತಿ ಪಡೆಯುವ ಕೆಲಸ ಮಹಿಳಾ ಸಿಬ್ಬಂದಿಗಳು ರಾತ್ರಿಪಾಳಿ ಗಸ್ತಿನಲ್ಲಿ ಮಾಡುತ್ತಾರೆ.ಕೇವಲ ಪುರುಷ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿದ್ದ ರಾತ್ರಿ ಗಸ್ತಿನ ಜವಾಬ್ದಾರಿಯನ್ನ ಮಹಿಳೆಯರೂ ಹೆಗಲ ಮೇಲೆ ಹೊತ್ತಿರುವ ನಡೆ ನಿಜಕ್ಕೂ ಶ್ಲಾಘನೀಯ.ಮುಂದಿನ ದಿನಗಳಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಈ ವ್ಯವಸ್ಥೆ ಕಾರ್ಯರೂಪಕ್ಕೆ ತರುವ ಯೋಜನೆ ಇದೆ.ಸಾಂಸ್ಕೃತಿಕ ನಗರಿಯ ನಾಗರೀಕರಿಗೆ ಒಂದಿಲ್ಲ ಒಂದು ರೀತಿಯಲ್ಲಿ ಅಭಯ ನೀಡುತ್ತಿರುವ ಮೈಸೂರು ಪೊಲೀಸರಿಗೆ ಮೆಚ್ಚುಗೆ ವ್ಯಕ್ತವಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *