ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ಮೈಸೂರು,ಆ11,Tv10 ಕನ್ನಡ

ರಾತ್ರಿ ಗಸ್ತಿಗೆ ಇನ್ಮುಂದು ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ.ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನ ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳ ರಾತ್ರಿ ಗಸ್ತಿನ ಕಾರ್ಯ ಆರಂಭವಾಗಿದೆ.ಸಧ್ಯ ಮೊದಲ ಹಂತದಲ್ಲಿ ಈ ಕಾರ್ಯಕ್ಕೆ ಹತ್ತು ಮಹಿಳಾ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ.ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ತಕ್ಕಂತೆ ಮತ್ತಷ್ಟು ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.ಮೃಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿದೆ.ಮಹಿಳೆಯರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ರಕ್ಷಣೆ ಒದಗಿಸಲು ಮೈಸೂರು ಖಾಕಿ ಪಡೆ ಆಧ್ಯತೆ ನೀಡಿದೆ.ಶಂಕಿತ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಿ ಅವರ ಸಂಪೂರ್ಣ ಮಾಹಿತಿ ಪಡೆಯುವ ಕೆಲಸ ಮಹಿಳಾ ಸಿಬ್ಬಂದಿಗಳು ರಾತ್ರಿಪಾಳಿ ಗಸ್ತಿನಲ್ಲಿ ಮಾಡುತ್ತಾರೆ.ಕೇವಲ ಪುರುಷ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿದ್ದ ರಾತ್ರಿ ಗಸ್ತಿನ ಜವಾಬ್ದಾರಿಯನ್ನ ಮಹಿಳೆಯರೂ ಹೆಗಲ ಮೇಲೆ ಹೊತ್ತಿರುವ ನಡೆ ನಿಜಕ್ಕೂ ಶ್ಲಾಘನೀಯ.ಮುಂದಿನ ದಿನಗಳಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಈ ವ್ಯವಸ್ಥೆ ಕಾರ್ಯರೂಪಕ್ಕೆ ತರುವ ಯೋಜನೆ ಇದೆ.ಸಾಂಸ್ಕೃತಿಕ ನಗರಿಯ ನಾಗರೀಕರಿಗೆ ಒಂದಿಲ್ಲ ಒಂದು ರೀತಿಯಲ್ಲಿ ಅಭಯ ನೀಡುತ್ತಿರುವ ಮೈಸೂರು ಪೊಲೀಸರಿಗೆ ಮೆಚ್ಚುಗೆ ವ್ಯಕ್ತವಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *