ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…

ಮೈಸೂರು,ಆ11,Tv10 ಕನ್ನಡ

ರಾತ್ರಿ ಗಸ್ತಿಗೆ ಇನ್ಮುಂದು ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ.ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನ ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳ ರಾತ್ರಿ ಗಸ್ತಿನ ಕಾರ್ಯ ಆರಂಭವಾಗಿದೆ.ಸಧ್ಯ ಮೊದಲ ಹಂತದಲ್ಲಿ ಈ ಕಾರ್ಯಕ್ಕೆ ಹತ್ತು ಮಹಿಳಾ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ.ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ತಕ್ಕಂತೆ ಮತ್ತಷ್ಟು ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.ಮೃಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿದೆ.ಮಹಿಳೆಯರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ರಕ್ಷಣೆ ಒದಗಿಸಲು ಮೈಸೂರು ಖಾಕಿ ಪಡೆ ಆಧ್ಯತೆ ನೀಡಿದೆ.ಶಂಕಿತ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಿ ಅವರ ಸಂಪೂರ್ಣ ಮಾಹಿತಿ ಪಡೆಯುವ ಕೆಲಸ ಮಹಿಳಾ ಸಿಬ್ಬಂದಿಗಳು ರಾತ್ರಿಪಾಳಿ ಗಸ್ತಿನಲ್ಲಿ ಮಾಡುತ್ತಾರೆ.ಕೇವಲ ಪುರುಷ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿದ್ದ ರಾತ್ರಿ ಗಸ್ತಿನ ಜವಾಬ್ದಾರಿಯನ್ನ ಮಹಿಳೆಯರೂ ಹೆಗಲ ಮೇಲೆ ಹೊತ್ತಿರುವ ನಡೆ ನಿಜಕ್ಕೂ ಶ್ಲಾಘನೀಯ.ಮುಂದಿನ ದಿನಗಳಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಈ ವ್ಯವಸ್ಥೆ ಕಾರ್ಯರೂಪಕ್ಕೆ ತರುವ ಯೋಜನೆ ಇದೆ.ಸಾಂಸ್ಕೃತಿಕ ನಗರಿಯ ನಾಗರೀಕರಿಗೆ ಒಂದಿಲ್ಲ ಒಂದು ರೀತಿಯಲ್ಲಿ ಅಭಯ ನೀಡುತ್ತಿರುವ ಮೈಸೂರು ಪೊಲೀಸರಿಗೆ ಮೆಚ್ಚುಗೆ ವ್ಯಕ್ತವಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *