ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಬ್ರೇಕ್ ಹಾಕಿ…ಶಾಸಕ ಶ್ರೀವತ್ಸ ಗೆ ಜೆ.ಪಿ.ನಗರ ನಿವಾಸಿಗಳ ಮನವಿ…

ಮೈಸೂರು,ಆ11,Tv10 ಕನ್ನಡ

ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಕಡಿವಾಣ ಹಾಕುವಂತೆ ಶಾಸಕ ಶ್ರೀವತ್ಸ ಗೆ ಜೆಪಿ ನಗರ D ಬ್ಲಾಕ್ ,ರೈಲ್ವೆ ಟ್ರಾಕ್,ನ ಸುತ್ತಮುತ್ತಲಿನ ಜನತೆ ಮನವಿ ಮಾಡಿದ್ದಾರೆ.ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಜೆಪಿ ನಗರ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಇಂದು ಪಾದಯಾತ್ರೆ ನಡೆಸಿ ಅಹವಾಲು ಸ್ವೀಕಾರಿಸುವ ವೇಳೆ ಶಾಸಕ
ಟಿ.ಎಸ್.ಶ್ರೀ ವತ್ಸಗೆ ದೂರುಗಳ ಸುರಿಮಳೆ ಆಯಿತು.

ಕವಿತಾ ಬೇಕರಿಯ ಪಕ್ಕದಲ್ಲಿ ಇರುವ ಟವರ್ ನಿಂದ ಈ ಸುತ್ತಮುತ್ತಲಾಗದ ಜನರಿಗೆ ಸಮಸ್ಯೆ ಆಗುತ್ತಿದೆ.ಟವರ್ ಇರುವ ಕಾರಣ ಈ ಭಾಗದಲ್ಲಿ ಅತಿ ಹೆಚ್ಚು ಕೋತಿಗಳು ಬರುತ್ತಿದೆ ಹಾಗೂ ಎಲೆಕ್ಟ್ರಿಕ್ ಪೋಲಿನ ಮೇಲೆ ಕರೆಂಟ್ ವೈರ್ ಹಾಗೂ ಕೇಬಲ್ ವೈರ್ ಗಳು ಅತಿ ಹೆಚ್ಚಿದ್ದು ಯಾವತ್ತಾದರೂ ಅನಾಹುತ ಅನುಭವಿಸಬಹುದು ಎಂಬ ಕಾರಣದಿಂದ ದಯಮಾಡಿ ಈ ಟವರ್ ನನ್ನು ಬಿಎಸ್ಎನ್ಎಲ್ ರವರ ಸ್ವಂತ ಜಾಗದಲ್ಲಿ ಅಳವಡಿಸಲು ಆದೇಶ ಮಾಡಬೇಕೆಂದು ಮನವಿ ಮಾಡಿದರು.

ಪಕ್ಕದಲ್ಲಿರುವ ಜೆ ಎಸ್ ಎಸ್ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅನುಚಿತವಾಗಿ ಸುತ್ತಮುತ್ತಲು ವರ್ತಿಸುತ್ತಾರೆ ಹಾಗೂ ಈ ಭಾಗದಲ್ಲಿ ಅತಿ ಹೆಚ್ಚು ಟು ವೀಲರ್ ರೈಡಿಂಗ್ ಗಳು ನಡೆಯುತ್ತಿರುತ್ತದೆ ದಯಮಾಡಿ ಬೆಳಿಗ್ಗೆ 9:00 ರಿಂದ 10 ಗಂಟೆಯವರೆಗೂ ಸಂಜೆ 4 ರಿಂದ 5 ಗಂಟೆಯವರೆಗೂ ಪೋಲಿಸ್ ನವರ ಗಸ್ತು ಹಾಕಿಸಿ ಕೊಡಬೇಕಾಗಿ ಮನವಿ ಮಾಡಿದರು.
ಸಂಬಂಧ ಪಟ್ಟ ಪೋಲಿಸ್ ಅಧಿಕಾರಿಗೆ ಶಾಸಕ ಶ್ರೀವತ್ಸ ಆದೇಶಮಾಡಿ ಕಡ್ಡಾಯವಾಗಿ ಗಸ್ತು ನಡೆಸಲು ಸೂಚಿಸಿದರು.

ರಸ್ತೆಯ ಇಕ್ಕೆಲದಲ್ಲಿರುವ ಮರಗಳು ತುಂಬಾ ಹಳೆಯದಾಗಿದ್ದು ರಸ್ತೆಗೆ ಬಾಗಿದೆ. ಅತಿಯಾದ ಮಳೆ ಅಥವಾ ಗಾಳಿ ಬಂದಂತ ಸಂದರ್ಭದಲ್ಲಿ ಮನೆಯ ಗೋಡೆಗಳ ಮೇಲೆ ಬಿಳುವ ಸಂಭವವಿದೆ ಅರಣ್ಯ ಇಲಾಖೆಯವರಿಗೆ ನಿರ್ದೇಶನ ನೀಡಿ ಈ ಮರಗಳನ್ನು ತೆಗೆಸಿಕೊಡಬೇಕಾಗಿ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ನಗರಪಾಲಿಕೆ ಸದಸ್ಯ ರಾದ ಶಾರದಮ್ಮ ಈಶ್ವರ್, ದೇವರಾಜೇ ಗೌಡ,ನಾಗರಾಜು ಟಿ.ವಿ.ಎಸ್.ಅಕ್ಷಯ್,ದೀಪು, ಶ್ರೀನಿವಾಸ್,ಜೋಗಿ ಮಂಜು, ಪ್ರದೀಪ್, ಕಿಶೋರ್, ಶಿವರಾಜ್ ಸಾಥ್ ನೀಡಿದರು…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *