ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ… ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ

ಮೈಸೂರು,ಆ14,Tv10 ಕನ್ನಡ
ದೇವರಾಜ ಮೊಹಲ್ಲಾದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ನಿರ್ಮಾಣವು ಅಪೂರ್ಣವಾಗಿರುವ ಹಿನ್ನೆಲೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಭವನ ಕಾಮಗಾರಿಯನ್ನು ಅಗತ್ಯವಿರುವ ಅನುದಾನ ಹೊಂದಿಸುವ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಬಾಕಿ ಉಳಿದಿರುವ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಭವನ ನಿರ್ಮಾಣದ ಜವಾಬ್ದಾರಿ ವಹಿಸಲಾಗಿದ್ದು, ಪ್ರಸ್ತುತ ನಿರ್ಮಾಣ ಕಾಮಗಾರಿಯು ಶೇ.75ರಷ್ಟು ಮುಗಿದಿದೆ. ಬಾಕಿ ಕಾಮಗಾರಿಯನ್ನು ಕೈಗೊಳ್ಳಲು ಸೂಕ್ತ ತಾಂತ್ರಿಕ ಸಮರ್ಥನೆಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಭವನವು ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿದ ಸಚಿವರು, ಕೂಡಲೇ ಭವನವನ್ನು ಸ್ವಚ್ಛಗೊಳಿಸಬೇಕು. ಸುತ್ತಲೂ ಬೆಳೆದಿರುವ ಗಿಡಗೆಂಟಿಗಳನ್ನು ತೆರವುಗೊಳಿಸಿ, ಯಾವುದೇ ಅನೈತಿಕ ಚಟುವಟಿಕೆಗೆ ಅವಕಾಶ ಮಾಡಿಕೊಡಬಾರದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಭೇಟಿಗೂ ಮುನ್ನ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 10 ಕೋಟಿ ರೂ. ಮುಡಾದಿಂದ 9.5 ಕೋಟಿ ರೂ., ಮಹಾನಗರ ಪಾಲಿಕೆಯಿಂದ 2.5 ಕೋಟಿ ರೂ. ಅನುದಾನ ನೀಡುವಂತೆ ತೀರ್ಮಾನಿಸಲಾಯಿತು.
ಈ ವೇಳೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮುಡಾ ಆಯುಕ್ತ ದಿನೇಶ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಅಶಾದ್ ಉರ್ ರೆಹ್ಮಾನ್ ಶರೀಫ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ 8 ಮಂದಿ ಬಂಧನ…ಓರ್ವ ರೌಡಿಶೀಟರ್…

ವಿಜಯನಗರ ಪೊಲೀಸರ ಕಾರ್ಯಾಚರಣೆ…ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ 8 ಮಂದಿ…

ಮೈಸೂರು,ಫೆ5,Tv10 ಕನ್ನಡ ಸ್ನೇಹಿತನ ತಂಗಿ ಬಗ್ಗೆ ಅಪಪ್ರಚಾರ ಮಾಡಿದ್ದ ಹಿನ್ನಲೆ ಬುದ್ದಿ ಹೇಳಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ 8 ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ವಿಜಯನಗರ ಠಾಣೆ…
ಐಸ್ ಕ್ರೀಂ ಮಾರಾಟ ನೆಪದಲ್ಲಿ ಮಹಿಳೆ ಚಿನ್ನದ ಸರ ಕಸಿದು ಸಿಕ್ಕಿಬಿದ್ದ ಕಳ್ಳ…ಆರೋಪಿ ಪೊಲೀಸರ ವಶಕ್ಕೆ…

ಐಸ್ ಕ್ರೀಂ ಮಾರಾಟ ನೆಪದಲ್ಲಿ ಮಹಿಳೆ ಚಿನ್ನದ ಸರ ಕಸಿದು ಸಿಕ್ಕಿಬಿದ್ದ…

ಹುಣಸೂರು,ಫೆ5,Tv10 ಕನ್ನಡ ಜಮೀನು ಕೆಲಸ ಮಾಡಲು ತೆರಳುತ್ತಿದ್ದ ಮಹಿಳೆಯನ್ನ ಐಸ್ ಮಾರಾಟ ಮಾಡುವ ನೆಪದಲ್ಲಿ ಹಿಂಬಾಲಿಸಿ ನಂತರ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತು ಪರಾರಿಯಾದ ಖದೀಮ ಪೊಲೀಸರ…
ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ…

ನಂಜನಗೂಡು,ಫೆ5,Tv10 ಕನ್ನಡ ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು…

Leave a Reply

Your email address will not be published. Required fields are marked *