ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಮೈಸೂರು,ಆ18,Tv10 ಕನ್ನಡ

ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್
ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ.ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ.
ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ.
ಶೂನ್ಯ ಬಿಲ್ ಅಂತಾರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ.
ಇಂತಹ‌ ದುರ್ದೆಸೆ ಇರುವ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಶಾಸಕರು ಹೋಗುತ್ತಾರೆ ಎಂದು ನಂಬಲು ಸಾಧ್ಯವಿಲ್ಲ.
ಹೋಗೋರನ್ನ ರಾಜಕೀಯ ಜಾಣ್ಮೆ ಇರೋರು,ಬುದ್ದಿವಂತರು ಎಂದು ಹೇಳಲ್ಲ.
ಹೋಗುವವರಿಗೆ ದೂರಾಲೋಚನೆ ಇದೆ‌ ಎಂದು ಹೇಳಲಾಗಲ್ಲ.
ಸರ್ಕಾರ ಬಂದಾಗಿನಿಂದ ಅಲ್ಲಿನ ಹಿರಿಯ ಶಾಸಕರಿಗೆ ಸಮಾಧಾನ ಇಲ್ಲ.
ಇಲ್ಲಿಂದ ಹೋದವರಿಗೆ ಏನ್ ಸಮಾಧಾನ ಸಿಗುತ್ತೆ.ಇದರಿಂದ ಹೋಗುವ ಸಾಧ್ಯತೆ ಇಲ್ಲ ಎಂದು ನಂಬುತ್ತೇನೆ.
ಸೋಮಶೇಖರ್ ಅವರ ಜೊತೆ ಮಾತನಾಡುತ್ತೇನೆ.
ಅವರ ಭಾವನೆ ಏನಿದೆ ಎಂದು ತಿಳಿದುಕೊಂಡು ಉಳಿದವರ ಜೊತೆ ಮಾತನಾಡುತ್ತೇನೆ.
ಚುನಾವಣೆ ಮುಗಿದು 3 ತಿಂಗಳಾಗಿದೆ.ನಾವು ಸೋತಿರುವವರೆ ಇನ್ನೊಬ್ಬರ ಕಡೆ ಬೊಟ್ಟು ಮಾಡುತ್ತಿಲ್ಲ.
ನಾವು ಸೋತಿರೋದಕ್ಕೆ ತಪ್ಪು ನಮ್ಮದು ಅಂತ ಹೇಳ್ತಿದ್ದೇವೆ.
ಸೋಮಶೇಖರ್ ಜೊತೆ ಪೋನ್‌ ನಲ್ಲಿ ಮಾತಮಾಡಿದ್ದೇನೆ.
ಕೂತು ಮಾತನಾಡಿದ ನಂತರ ಎಲ್ಲವು ಬಗೆಹರಿಯುತ್ತೆ ಎಂದು ಹೇಳಿಕೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *