ಗ್ರಾಹಕನ ಸೋಗಿನಲ್ಲಿ ಚಿನ್ನದ ಸರ ಲಪಟಾಯಿಸಿದ ಖದೀಮನ ಬಂಧನ…2 ಲಕ್ಷ ಮೌಲ್ಯದ 2 ಚಿನ್ನದ ಸರ ವಶ…

ಗ್ರಾಹಕನ ಸೋಗಿನಲ್ಲಿ ಚಿನ್ನದ ಸರ ಲಪಟಾಯಿಸಿದ ಖದೀಮನ ಬಂಧನ…2 ಲಕ್ಷ ಮೌಲ್ಯದ 2 ಚಿನ್ನದ ಸರ ವಶ…

  • Crime
  • August 19, 2023
  • No Comment
  • 211

ಮೈಸೂರು,ಆ19,Tv10 ಕನ್ನಡ

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಲಪಟಾಯಿಸಿದ್ದ ಖದೀಮನನ್ನ ಬಂಧಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಅರಕಲಗೂಡು ನಿವಾಸಿ ಪ್ರತಾಪ್(25) ಬಂಧಿತ ಆರೋಪಿ.ಬಂಧಿತನಿಂದ 2 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಹರಿ ಜ್ಯೂಯಲರ್ಸ್ ನಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ಆರೋಪಿ ಗಮನ ಬೇರೆಡ ಸೆಳೆದು 40 ಗ್ರಾಂ ತೂಕದ ಎರಡು ಚಿನ್ನದ ಸರ ಕಳುವು ಮಾಡಿದ್ದ.ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಈ ಸಂಭಂಧ ಶ್ರೀಹರಿ ಜ್ಯೂಯಲರ್ ಮಾಲೀಕರು ಲಷ್ಕರ್ ಠಾಣೆಗೆ ದೂರು ನೀಡಿದ್ದರು.ಖದೀಮನ ಬಂಧನಕ್ಕೆ ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಮಾರ್ಗದರ್ಶನದಲ್ಲಿ ಹಾಗೂ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ಹಾಗೂ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಗಣಗೇರಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಲೋಕೇಶ್,ಚೇತನ್,ಚಿನ್ನಪ್ಪ,ಮಂಜುನಾಥ್,ಲಾಳೇಸಾಬ್ ನಡಾಫ್,ಮಂಜುನಾಥ್ ಗದಗೈಗೋಳ,ಕುಮಾರ್ ರವರನ್ನೊಳಗೊಂಡ ತಂಡ ರಚಿಸಲಾಗಿತ್ತು.ಆರೋಪಿಯನ್ನ ಸೆರೆ ಹೊಡಿಯುವಲ್ಲಿ ತಂಡ ಯಶಸ್ವಿಯಾಗಿದೆ. ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಪ್ರಶಂಸಿಸಿದ್ದಾರೆ..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *