ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಮೈಸೂರು,ಆ19,Tv10 ಕನ್ನಡ

ಬೆಳ್ಳಂಬೆಳಗ್ಗೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದವರಿಗೆ ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಶಾಕ್ ಕೊಟ್ಟಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಸರ್ಕಾರಿ ಗೋಮಾಳ ರಕ್ಷಿಸಿದ್ದಾರೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ಹಸು ಕೊಟ್ಟಿಗೆಗಳನ್ನ ನೆಲಸಮ ಮಾಡಿ ತೆರುವುಗೊಳಿಸಿದ್ದಾರೆ.ಮಳೆಯನ್ನೂ ಲೆಕ್ಕಿಸದ ತಹಸೀಲ್ದಾರ್ ತೆರುವು ಕಾರ್ಯಾಚರಣೆ ನಡೆಸಿದ್ದಾರೆ.

ಮೈಸೂರು ತಾಲೂಕು ಇಲವಾಲ ಹೋಬಳಿ ಆನಂದೂರು ಗ್ರಾಮದ ಸರ್ವೆ ನಂ 6 ಮೂಲತಃ ಸರ್ಕಾರಿ ಗೋಮಾಳ.1996 ರಲ್ಲಿ ಆಶ್ರಯ ಯೋಜನೆಗಾಗಿ 4 ಎಕ್ರೆ ಮಂಜೂರಾಗಿತ್ತು.ಸದರಿ ಜಮೀನಿನಲ್ಲಿ ಆನಂದೂರು ಗ್ರಾಮದ ಗವಿರಂಗೇಗೌಡ ಹಾಗೂ ಇತರರು 20 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸದರಿ ಜಮೀನಿನಲ್ಲಿ ಹಸು ಕೊಟ್ಟಿಗೆ ಸಹ ನಿರ್ಮಿಸಲಾಗಿದೆ.ಬೆಳಗಿನ ಮಳೆಯಲ್ಲೂ ಸಹ ತೆರುವು ಕಾರ್ಯಾಚರಣೆ ಪೂರ್ಣಗೊಳಿಸಿ ಸರ್ಕಾರಿ ಜಮೀನನ್ನ ರಕ್ಷಿಸಿದ್ದಾರೆ.

ತಹಸೀಲ್ದಾರ್ ಟಿ.ಎನ್.ಗಿರೀಶ್ ಗೆ ತಾಲೂಕು ಪಂಚಾಯ್ತಿ ಇ.ಓ.ಗಿರೀಶ್,ಭೂ ದಾಖಲೆಗಳ ಸಹಾಯಕ ನಿರ್ದೇಶಕ ಚಿಕ್ಕಣ್ಣ,ತಾಲೂಕು ಸರ್ವೇಯರ್ ವೆಂಕಟೇಶ್,ಉಪತಹಸೀಲ್ದಾರ್ ಕುಬೇರ್,ರಾಜಸ್ವ ನಿರೀಕ್ಷಕರಾದ ಶಿವಕುಮಾರ್ ಸೇರಿದಂತೆ ಇತರರು ಸಾಥ್ ನೀಡಿದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *