
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…
- TV10 Kannada Exclusive
- August 19, 2023
- No Comment
- 134
ಟಿ.ನರಸೀಪುರ,ಆ19,Tv10 ಕನ್ನಡ
ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಟಿ ನರಸೀಪುರದಲ್ಲಿ ಅನ್ನದಾತರು ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ಚಳುವಳಿ ನಡೆಸಿದರು.ಪ್ರತಿಭಟನಾ ನಿರತ ರೈತರನ್ನ ಪೊಲೀಸರು ಬಂಧಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬುಬೆಳೆಗಾರರ ಸಂಘ.ಟಿ ನರಸೀಪುರ ತಾಲೂಕು ಘಟಕದ ವತಿಯಿಂದ ನೂರಾರು ರೈತರು ಪ್ರತಿಭಟನೆ ನಡೆಸಿದರು ರಾಷ್ಟ್ರೀಯ ಹೆದ್ದಾರಿ ಬಿಂದಿಗೆ ಫ್ಯಾಕ್ಟರಿ ಹತ್ತಿರ ರೈತರು ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಿ ರಾಜ್ಯದ ರೈತರ ಹಿತರಕ್ಷಣೆ ಕಾಪಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಕೈ ಬಿಡಲು ನಿರಾಕರಿಸಿದ ರೈತರನ್ನ ಪೊಲೀಸರು ಬಂಧಿಸಿದರು.ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಹಳ್ಳಿ ಕೆರೆಹುಂಡಿ ಭಾಗ್ಯರಾಜ್, ಕಿರಗಸೂರ್ ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಪ್ರಸಾದ್ ನಾಯಕ್, ಪ್ರದೀಪ್ ಕುರುಬೂರು,ರಾಜೇಶ್, ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ, ಅನಿಲ್ ಹೊಸೂರು, ಗೌರಿಶಂಕರ್, ವಾಜ್ ಕುಮಾರ್, ತರಕಾರಿ ನಿಂಗರಾಜು, ಅಪ್ಪಣ್ಣ, ಮಾದೇವ ಪ್ರಸಾದ್, ಜಾಲಹಳ್ಳಿ ರಾಜೇಶ್, ಉಮೇಶ್ ಇನ್ನು ಹಲವು ರೈತರು ಚಳುವಳಿಯಲ್ಲಿ ಭಾಗವಹಿಸಿದ್ದರು..