ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…

ಟಿ.ನರಸೀಪುರ,ಆ19,Tv10 ಕನ್ನಡ

ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಟಿ ನರಸೀಪುರದಲ್ಲಿ ಅನ್ನದಾತರು ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ಚಳುವಳಿ ನಡೆಸಿದರು.ಪ್ರತಿಭಟನಾ ನಿರತ ರೈತರನ್ನ ಪೊಲೀಸರು ಬಂಧಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬುಬೆಳೆಗಾರರ ಸಂಘ.ಟಿ ನರಸೀಪುರ ತಾಲೂಕು ಘಟಕದ ವತಿಯಿಂದ ನೂರಾರು ರೈತರು ಪ್ರತಿಭಟನೆ ನಡೆಸಿದರು ರಾಷ್ಟ್ರೀಯ ಹೆದ್ದಾರಿ ಬಿಂದಿಗೆ ಫ್ಯಾಕ್ಟರಿ ಹತ್ತಿರ ರೈತರು ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಿ ರಾಜ್ಯದ ರೈತರ ಹಿತರಕ್ಷಣೆ ಕಾಪಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಕೈ ಬಿಡಲು ನಿರಾಕರಿಸಿದ ರೈತರನ್ನ ಪೊಲೀಸರು ಬಂಧಿಸಿದರು.ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಹಳ್ಳಿ ಕೆರೆಹುಂಡಿ ಭಾಗ್ಯರಾಜ್, ಕಿರಗಸೂರ್ ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಪ್ರಸಾದ್ ನಾಯಕ್, ಪ್ರದೀಪ್ ಕುರುಬೂರು,ರಾಜೇಶ್, ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ, ಅನಿಲ್ ಹೊಸೂರು, ಗೌರಿಶಂಕರ್, ವಾಜ್ ಕುಮಾರ್, ತರಕಾರಿ ನಿಂಗರಾಜು, ಅಪ್ಪಣ್ಣ, ಮಾದೇವ ಪ್ರಸಾದ್, ಜಾಲಹಳ್ಳಿ ರಾಜೇಶ್, ಉಮೇಶ್ ಇನ್ನು ಹಲವು ರೈತರು ಚಳುವಳಿಯಲ್ಲಿ ಭಾಗವಹಿಸಿದ್ದರು..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *