ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಆ 21,Tv10 ಕನ್ನಡ ಅತಿಯಾದ ಮಳೆಯಿಂದ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ ಹಾನಿಯಿಂದ ಮನೆ ಬಿದ್ದು ಹೋಗಿರುವವರಿಗೆ ಪರಿಹಾರ ನೀಡಿ ಅವರಿಗೆ ಸೂರು ನಿರ್ಮಿಸಿ ಕೊಡಿ. ತಹಶೀಲ್ದಾರ್, ಕಾರ್ಯಪಾಲಕ ಅಭಿಯಂತರರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಗಳು ಸೇರಿ ಮನೆ ಹಾನಿ ಕುರಿತು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಮನೆಯು ಮಳೆ ಹಾನಿಯಿಂದ ಬಿದ್ದಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ. ಮಳೆಯಿಂದ ಹಾನಿ ಆಗಿರುವ ಮನೆಗಳಿಗೆ ಮೊದಲ ಹಂತದ ಪರಿಹಾರ ಕೂಡಲೇ ವಿತರಣೆ ಮಾಡಬೇಕು. ಈ ಕುರಿತ ಮಾಹಿತಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಳುಹಿಸಿ ಕೊಡಬೇಕು ಎಂದು ತಿಳಿಸಿದರು.
ಕಳೆದ 2-3 ವರ್ಷಗಳಿಂದ ಮಳೆಯಿಂದ ಹಾನಿ ಉಂಟಾಗಿದೆ ಎಂದು ಪರಿಹಾರ ಪಡೆದು ಸಹ ಕೆಲವರು ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಮನೆ ಹಾನಿ ಉಂಟಾಗದೆ ಇರುವವರ ಅರ್ಜಿಗಳನ್ನು ರಿಜೆಕ್ಟ್ ಮಾಡಲು ತಹಶೀಲ್ದಾರರು ಪಟ್ಟಿ ಕಳುಹಿಸಿಕೊಡಬೇಕು ಎಂದು ಮಾಹಿತಿ ನೀಡಿದರು.
ಮಳೆಯಿಂದ ಹಾನಿ ಆಗಿರುವ ಅಂಗನವಾಡಿ, ಶಾಲೆಗಳು ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳ ದುರಸ್ತಿಗೆ 2 ಲಕ್ಷದ ವರೆಗೆ ಅನುದಾನ ನೀಡಲಾಗುವುದು ಎಂದರು.ವಿವಿಧ ಯೋಜನೆಗಳಡಿ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಕೆಲವರು ಮರಣ ಹೊಂದಿದ್ದರೂ ಅವರ ಖಾತೆಗೆ ಪಿಂಚಣಿ ಹೋಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಅವರನ್ನು ಪಿಂಚಣಿ ಪಟ್ಟಿಯಿಂದ ಕೈಬಿಡಬೇಕು.ಇಲ್ಲದಿದ್ದರೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *