ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಆ 21,Tv10 ಕನ್ನಡ ಅತಿಯಾದ ಮಳೆಯಿಂದ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ ಹಾನಿಯಿಂದ ಮನೆ ಬಿದ್ದು ಹೋಗಿರುವವರಿಗೆ ಪರಿಹಾರ ನೀಡಿ ಅವರಿಗೆ ಸೂರು ನಿರ್ಮಿಸಿ ಕೊಡಿ. ತಹಶೀಲ್ದಾರ್, ಕಾರ್ಯಪಾಲಕ ಅಭಿಯಂತರರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಗಳು ಸೇರಿ ಮನೆ ಹಾನಿ ಕುರಿತು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಮನೆಯು ಮಳೆ ಹಾನಿಯಿಂದ ಬಿದ್ದಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ. ಮಳೆಯಿಂದ ಹಾನಿ ಆಗಿರುವ ಮನೆಗಳಿಗೆ ಮೊದಲ ಹಂತದ ಪರಿಹಾರ ಕೂಡಲೇ ವಿತರಣೆ ಮಾಡಬೇಕು. ಈ ಕುರಿತ ಮಾಹಿತಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಳುಹಿಸಿ ಕೊಡಬೇಕು ಎಂದು ತಿಳಿಸಿದರು.
ಕಳೆದ 2-3 ವರ್ಷಗಳಿಂದ ಮಳೆಯಿಂದ ಹಾನಿ ಉಂಟಾಗಿದೆ ಎಂದು ಪರಿಹಾರ ಪಡೆದು ಸಹ ಕೆಲವರು ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಮನೆ ಹಾನಿ ಉಂಟಾಗದೆ ಇರುವವರ ಅರ್ಜಿಗಳನ್ನು ರಿಜೆಕ್ಟ್ ಮಾಡಲು ತಹಶೀಲ್ದಾರರು ಪಟ್ಟಿ ಕಳುಹಿಸಿಕೊಡಬೇಕು ಎಂದು ಮಾಹಿತಿ ನೀಡಿದರು.
ಮಳೆಯಿಂದ ಹಾನಿ ಆಗಿರುವ ಅಂಗನವಾಡಿ, ಶಾಲೆಗಳು ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳ ದುರಸ್ತಿಗೆ 2 ಲಕ್ಷದ ವರೆಗೆ ಅನುದಾನ ನೀಡಲಾಗುವುದು ಎಂದರು.ವಿವಿಧ ಯೋಜನೆಗಳಡಿ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಕೆಲವರು ಮರಣ ಹೊಂದಿದ್ದರೂ ಅವರ ಖಾತೆಗೆ ಪಿಂಚಣಿ ಹೋಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಅವರನ್ನು ಪಿಂಚಣಿ ಪಟ್ಟಿಯಿಂದ ಕೈಬಿಡಬೇಕು.ಇಲ್ಲದಿದ್ದರೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *