ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಆ 21,Tv10 ಕನ್ನಡ ಅತಿಯಾದ ಮಳೆಯಿಂದ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ ಹಾನಿಯಿಂದ ಮನೆ ಬಿದ್ದು ಹೋಗಿರುವವರಿಗೆ ಪರಿಹಾರ ನೀಡಿ ಅವರಿಗೆ ಸೂರು ನಿರ್ಮಿಸಿ ಕೊಡಿ. ತಹಶೀಲ್ದಾರ್, ಕಾರ್ಯಪಾಲಕ ಅಭಿಯಂತರರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಗಳು ಸೇರಿ ಮನೆ ಹಾನಿ ಕುರಿತು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಮನೆಯು ಮಳೆ ಹಾನಿಯಿಂದ ಬಿದ್ದಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ. ಮಳೆಯಿಂದ ಹಾನಿ ಆಗಿರುವ ಮನೆಗಳಿಗೆ ಮೊದಲ ಹಂತದ ಪರಿಹಾರ ಕೂಡಲೇ ವಿತರಣೆ ಮಾಡಬೇಕು. ಈ ಕುರಿತ ಮಾಹಿತಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಳುಹಿಸಿ ಕೊಡಬೇಕು ಎಂದು ತಿಳಿಸಿದರು.
ಕಳೆದ 2-3 ವರ್ಷಗಳಿಂದ ಮಳೆಯಿಂದ ಹಾನಿ ಉಂಟಾಗಿದೆ ಎಂದು ಪರಿಹಾರ ಪಡೆದು ಸಹ ಕೆಲವರು ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಮನೆ ಹಾನಿ ಉಂಟಾಗದೆ ಇರುವವರ ಅರ್ಜಿಗಳನ್ನು ರಿಜೆಕ್ಟ್ ಮಾಡಲು ತಹಶೀಲ್ದಾರರು ಪಟ್ಟಿ ಕಳುಹಿಸಿಕೊಡಬೇಕು ಎಂದು ಮಾಹಿತಿ ನೀಡಿದರು.
ಮಳೆಯಿಂದ ಹಾನಿ ಆಗಿರುವ ಅಂಗನವಾಡಿ, ಶಾಲೆಗಳು ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳ ದುರಸ್ತಿಗೆ 2 ಲಕ್ಷದ ವರೆಗೆ ಅನುದಾನ ನೀಡಲಾಗುವುದು ಎಂದರು.ವಿವಿಧ ಯೋಜನೆಗಳಡಿ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಕೆಲವರು ಮರಣ ಹೊಂದಿದ್ದರೂ ಅವರ ಖಾತೆಗೆ ಪಿಂಚಣಿ ಹೋಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಅವರನ್ನು ಪಿಂಚಣಿ ಪಟ್ಟಿಯಿಂದ ಕೈಬಿಡಬೇಕು.ಇಲ್ಲದಿದ್ದರೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *