ವರಮಹಾಲಕ್ಷ್ಮಿ ಹಬ್ಬದ ಹಿನ್ನಲೆ ಮಹಿಳೆಯರಿಗೆ ಸೆಲ್ಫಿ ಸ್ಪರ್ಧೆ…ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ…

ವರಮಹಾಲಕ್ಷ್ಮಿ ಹಬ್ಬದ ಹಿನ್ನಲೆ ಮಹಿಳೆಯರಿಗೆ ಸೆಲ್ಫಿ ಸ್ಪರ್ಧೆ…ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ…

  • Temples
  • August 21, 2023
  • No Comment
  • 253

ಮೈಸೂರು,ಆ21,Tv10 ಕನ್ನಡ

ಆಗಸ್ಟ್ 25 ರಂದು ಮಹಿಳೆಯರು ಸಂಭ್ರಮದಿಂದ ಆಚರಿಸುವ ವರಮಹಾಲಕ್ಷ್ಮಿ ಹಬ್ಬ.ಸಂಭ್ರಮದಲ್ಲಿ ಪಾಲ್ಗೊಳ್ಳುವ ಮಹಿಳೆಯರಿಗೆ ಕೆ.ಎಂ.ಪಿ.ಕೆ.ಟ್ರಸ್ಟ್ ಸ್ಪರ್ಧೆ ಏರ್ಪಡಿಸಿದೆ.ಅಲಂಕರಿಸಲಾದ ವರಮಹಾಲಕ್ಷಿ ಜೊತೆ ಸೆಲ್ಫಿ ಫೋಟೋ ಸ್ಪರ್ಧೆ ಏರ್ಪಡಿಸಿದೆ.ಹಬ್ಬದ ಸಂಭ್ರಮವನ್ನ ಸ್ಪರ್ಧೆಯ ಮೂಲಕವೂ ಹಂಚಿಕೊಳ್ಳುವ ಭಾಗ್ಯ ಮಹಿಳೆಯರಿಗೆ ಕಲ್ಪಿಸಲಾಗಿದೆ.ಆನ್ ಲೈನ್ ಮೂಲಕ ಸೆಲ್ಫಿ ಕ್ಲಿಕ್ಕಿಸಿದ ಫೋಟೋಗಳನ್ನ ಕಳುಹಿಸಬಹುದಾಗಿದೆ.ಈ ಅಂಗವಾಗಿ ಇಂದು ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಪ್ರಚಾರ ಸಾಮಗ್ರಿಗಳನ್ನು ಉಡುಪಿಯ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರು ಬಿಡುಗಡೆಗೊಳಿಸಿದ್ದಾರೆ.ನಂತರ ಮಾತನಾಡಿ
ಹಬ್ಬದಂತಹ ಧಾರ್ಮಿಕ ಆಚರಣೆಗಳು ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಮುನ್ನುಡಿ ಬರೆಯುತ್ತದೆ. ಮನೆಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ ಬೆಳೆಸಿಕೊಳ್ಳಲು ಪರಂಪರೆ ಉಳಿಯಲು ಪ್ರೇರೇಪಣೆ ನೀಡುತ್ತವೆ. ಇಂತಹ ಹಬ್ಬಗಳ ಆಚರಣೆ ಮನಸ್ಸಿಗೆ ನೆಮ್ಮದಿ ತಂದುಕೊಡುತ್ತದೆ.
ಹಬ್ಬದ ಆಚರಣೆಗಳಲ್ಲಿ ಇಂತಹ ಸ್ಪರ್ಧೆಗಳು ಮಹಿಳೆಯರಲ್ಲಿ ಹಾಗೂ ಮಕ್ಕಳಲ್ಲಿ ಹೆಚ್ಚಿನ ಮಟ್ಟದಲ್ಲಿ ಆಸಕ್ತಿ ಹಾಗೂ ವಿನೂತನ ಅಭಿರುಚಿ ಮೂಡಲು ಒತ್ತಾಸೆಯಾಗಿ ನಿಲ್ಲುತ್ತದೆ. ಸ್ಪರ್ಧಾತ್ಮಕ ಶಕ್ತಿ ಮಕ್ಕಳಲ್ಲಿ ಬೆಳೆದರೆ ಮಕ್ಕಳ ಪ್ರತಿಭೆ ಗುರುತಿಸಲು ಇಂತಹ ವೇದಿಕೆಗಳು ಅವಶ್ಯಕ ಎಂದರು..

ನಂತರ ಮಾತನಾಡಿದ ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್ ಆನ್ಲೈನ್ ಮೂಲಕ ಮನೆಯಲ್ಲಿ ಅಲಂಕರಿಸಿ ಕೂರಿಸಿರುವ ವರಮಹಾಲಕ್ಷ್ಮಿ ದೇವಿಯ ಜೊತೆಗೆ ಫೋಟೋವನ್ನು ಕಳಿಸುವ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು, ನೊಂದಣಿ ಶುಲ್ಕ 100ರೂ
ಇರುತ್ತದೆ, ಆಗಸ್ಟ್ 26ರ ಬೆಳಿಗ್ಗೆ 11 ಗಂಟೆಯ ಒಳಗಡೆ 9880752727 ದೂರವಣಿಗೆ ವರಮಹಾಲಕ್ಷ್ಮಿ ಜೊತೆ ಫೋಟೋ ಮತ್ತು ವಿಳಾಸ ಕಳಿಸಿಕೊಡಬೇಕು. ಅತ್ಯುತ್ತಮ 10 ಚಿತ್ರಕ್ಕೆ ಬಹುಮಾನ ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಸ್ಪರ್ಧೆಯ ವಿವರ ತಿಳಿಸಿದರು.

ಚಾತುರ್ಮಾಸ ಸಮಿತಿಯ ಕಾರ್ಯಧ್ಯಕ್ಷ ರವಿ ಶಾಸ್ತ್ರಿ, ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್, ರೂಪದರ್ಶಿ ತನಿಷ್ಕಮೂರ್ತಿ, ಮುಖಂಡರಾದ ಲಕ್ಷ್ಮೀದೇವಿ, ಜ್ಯೋತಿ ರೇಚಣ್ಣ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ಎಂ ಪಂಚಾಕ್ಷರಿ, ಸವಿತಾ ಘಾಟ್ಕೆ, ನಾಗಮಣಿ, ರುಕ್ಮಿಣಿ, ಸುಚೀಂದ್ರ, ಚರಣ್, ದರ್ಶನ್, ಹಾಗೂ ಇನ್ನಿತರರು ಈ ಸಂಧರ್ಭದಲ್ಲಿ ಹಾಜರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *