ತಮಿಳುನಾಡಿಗೆ ನೀರು ನಿಲ್ಲಿಸಿ…ಖಾಲಿ ಬಿಂದಿಗೆ ಪ್ರದರ್ಶಿಸಿ ರೈತರ ಪ್ರತಿಭಟನೆ…ಮುಖ್ಯಮಂತ್ರಿಚಂದ್ರು ಸಾಥ್…

ಮೈಸೂರು,ಆ23,Tv10 ಕನ್ನಡ

ಕಬಿನಿ ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಕ್ರಮವನ್ನ ಖಂಡಿಸಿ ರೈತರು ಇಂದು ಕಾಡಾ ಕಚೇರಿಗೆ ಮುಂದು ಪ್ರತಿಭಟಿಸಿದರು.ರೈತರಿಗೆ ದ್ರೋಹ ಬಗೆಯುತ್ತಿರುವ ಸರ್ಕಾರದ ವಿರುದ್ಧ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.
ರೈತ ಮುಖಂಡರನ್ನು ಹೊರಗಿಟ್ಟು ನಾಟಕೀಯವಾಗಿ ಸರ್ವ ಪಕ್ಷ ಸಭೆ ನಡೆಸುವ ಕಾರ್ಯಕ್ಕೆ ಧಿಕ್ಕಾರವಿರಲಿ ಕೂಡಲೇ ನೀರು ನಿಲ್ಲಿಸದಿದ್ದರೆ ರಾಜ್ಯ ವ್ಯಾಪಿ ಚಳುವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕನ್ನಡಪರ ಸಂಘಟನೆಗಳು, ಅಮ್ಮಾ ಅದ್ಮೀ ಪಕ್ಷದ ವತಿಯಿಂದ ಇಂದು ಕುವೆಂಪು ಉದ್ಯಾನವನದಲ್ಲಿ ಸಭೆ ಸೇರಿ ಚರ್ಚಿಸಿ ನಂತರ ಪ್ರತಿಭಟನೆ ಮೆರವಣಿಗೆ ಮೂಲಕ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ನಿಯಂತ್ರಿಸಿದರು.ಇಂದಿನ ರೈತರ ಪ್ರತಿಭಟನೆಗೆ ಚಿತ್ರನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಾಥ್ ನೀಡಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ ರಾಜ್ಯದ ರೈತರ ಹಿತ ಶಕ್ತಿ ಕಾಪಾಡುವ ಕಚೇರಿಯಾಗಿದ್ದರೆ ಕೂಡಲೇ ನದಿಗೆ ನೀರು ಹರಿಸುವುದನ್ನ‌ ನಿಲ್ಲಿಸಿ ಇಲ್ಲವೇ ಕಚೇರಿ ಬಾಗಿಲು ಮುಚ್ಚಿ ಮನೆಗೆ ಹೋಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು

ಆಮ್ ಆದ್ಮೀ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ ರಾಜ್ಯ ಸರ್ಕಾರ ತುಳಿತಕ್ಕೆ ಒಳಗಾದ ರೈತ ಮುಖಂಡರನ್ನು ಹೊರಗಿಟ್ಟು ರೈತರಿಗೆ ಅನ್ಯಾಯ ಮಾಡುವವರೇ ಸರ್ವ ಪಕ್ಷದ ಸಭೆ ನಡೆಸುವುದು ಸಮಂಜಸ ಅಲ್ಲ. ಪಕ್ಷಗಳು ನೀರಿನ ವಿಚಾರದಲ್ಲಿ ರೈತರಿಗೆ ವಂಚನೆ ಮಾಡುತ್ತಲೆ ಬಂದಿದ್ದಾರೆ. ಅಂತಹವರೇ ಇಂದು ಸಭೆ ನಡೆಸುತ್ತಿದ್ದಾರೆ. ಇವರಿಂದ ರಾಜ್ಯದ ರೈತರಿಗೆ ನ್ಯಾಯ ಸಿಗಲು ಸಾಧ್ಯವೇ..?ಎಂದು ಪ್ರಶ್ನಿಸಿದರು…

ಇಂದಿನ ಪ್ರತಿಭಟನೆಯಲ್ಲಿ ರೈತ ಮುಖಂಡ ಮೀಸೆ ಮಂಜಣ್ಣ,ಹತ್ತಳಿ ದೇವರಾಜ್ ಫಿ ಸೋಮಶೇಖರ್
ಬರಡನಫುರ ನಾಗರಾಜು, ಹಳಿಕರೆಹುಂಡಿ ಬಾಗ್ಯರಾಜ್, ಕಿರಗಸೂರಶಂಕರ ಕಮಲಮ್ಮ ಸಿದ್ದೇಶ. ವೆಂಕಟೇಶ ,ರವಿ ಕನ್ನಡ ಸಂಘಟನೆಗಳ ಮಂಜುನಾಥ್
ಅಮ್ಮ್ ಅದ್ಮೀ ಪಕ್ಷದ ಮೋಹನ್ ದಾಸರಿ ಕುಶಾಲಸ್ವಾಮಿ
ನಂಜಪ್ಪ ಕಾಳೇಗೌಡ ಮಾಳವಿಕಾ
ರಂಗಯ್ಯ ರಾಜಶ್ರೀ ಸಿದ್ದರಾಜು ಭಾಗವಹಿಸಿದ್ದರು…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *