ತಮಿಳುನಾಡಿಗೆ ನೀರು ನಿಲ್ಲಿಸಿ…ಖಾಲಿ ಬಿಂದಿಗೆ ಪ್ರದರ್ಶಿಸಿ ರೈತರ ಪ್ರತಿಭಟನೆ…ಮುಖ್ಯಮಂತ್ರಿಚಂದ್ರು ಸಾಥ್…

ಮೈಸೂರು,ಆ23,Tv10 ಕನ್ನಡ

ಕಬಿನಿ ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಕ್ರಮವನ್ನ ಖಂಡಿಸಿ ರೈತರು ಇಂದು ಕಾಡಾ ಕಚೇರಿಗೆ ಮುಂದು ಪ್ರತಿಭಟಿಸಿದರು.ರೈತರಿಗೆ ದ್ರೋಹ ಬಗೆಯುತ್ತಿರುವ ಸರ್ಕಾರದ ವಿರುದ್ಧ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.
ರೈತ ಮುಖಂಡರನ್ನು ಹೊರಗಿಟ್ಟು ನಾಟಕೀಯವಾಗಿ ಸರ್ವ ಪಕ್ಷ ಸಭೆ ನಡೆಸುವ ಕಾರ್ಯಕ್ಕೆ ಧಿಕ್ಕಾರವಿರಲಿ ಕೂಡಲೇ ನೀರು ನಿಲ್ಲಿಸದಿದ್ದರೆ ರಾಜ್ಯ ವ್ಯಾಪಿ ಚಳುವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕನ್ನಡಪರ ಸಂಘಟನೆಗಳು, ಅಮ್ಮಾ ಅದ್ಮೀ ಪಕ್ಷದ ವತಿಯಿಂದ ಇಂದು ಕುವೆಂಪು ಉದ್ಯಾನವನದಲ್ಲಿ ಸಭೆ ಸೇರಿ ಚರ್ಚಿಸಿ ನಂತರ ಪ್ರತಿಭಟನೆ ಮೆರವಣಿಗೆ ಮೂಲಕ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ನಿಯಂತ್ರಿಸಿದರು.ಇಂದಿನ ರೈತರ ಪ್ರತಿಭಟನೆಗೆ ಚಿತ್ರನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಾಥ್ ನೀಡಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ ರಾಜ್ಯದ ರೈತರ ಹಿತ ಶಕ್ತಿ ಕಾಪಾಡುವ ಕಚೇರಿಯಾಗಿದ್ದರೆ ಕೂಡಲೇ ನದಿಗೆ ನೀರು ಹರಿಸುವುದನ್ನ‌ ನಿಲ್ಲಿಸಿ ಇಲ್ಲವೇ ಕಚೇರಿ ಬಾಗಿಲು ಮುಚ್ಚಿ ಮನೆಗೆ ಹೋಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು

ಆಮ್ ಆದ್ಮೀ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ ರಾಜ್ಯ ಸರ್ಕಾರ ತುಳಿತಕ್ಕೆ ಒಳಗಾದ ರೈತ ಮುಖಂಡರನ್ನು ಹೊರಗಿಟ್ಟು ರೈತರಿಗೆ ಅನ್ಯಾಯ ಮಾಡುವವರೇ ಸರ್ವ ಪಕ್ಷದ ಸಭೆ ನಡೆಸುವುದು ಸಮಂಜಸ ಅಲ್ಲ. ಪಕ್ಷಗಳು ನೀರಿನ ವಿಚಾರದಲ್ಲಿ ರೈತರಿಗೆ ವಂಚನೆ ಮಾಡುತ್ತಲೆ ಬಂದಿದ್ದಾರೆ. ಅಂತಹವರೇ ಇಂದು ಸಭೆ ನಡೆಸುತ್ತಿದ್ದಾರೆ. ಇವರಿಂದ ರಾಜ್ಯದ ರೈತರಿಗೆ ನ್ಯಾಯ ಸಿಗಲು ಸಾಧ್ಯವೇ..?ಎಂದು ಪ್ರಶ್ನಿಸಿದರು…

ಇಂದಿನ ಪ್ರತಿಭಟನೆಯಲ್ಲಿ ರೈತ ಮುಖಂಡ ಮೀಸೆ ಮಂಜಣ್ಣ,ಹತ್ತಳಿ ದೇವರಾಜ್ ಫಿ ಸೋಮಶೇಖರ್
ಬರಡನಫುರ ನಾಗರಾಜು, ಹಳಿಕರೆಹುಂಡಿ ಬಾಗ್ಯರಾಜ್, ಕಿರಗಸೂರಶಂಕರ ಕಮಲಮ್ಮ ಸಿದ್ದೇಶ. ವೆಂಕಟೇಶ ,ರವಿ ಕನ್ನಡ ಸಂಘಟನೆಗಳ ಮಂಜುನಾಥ್
ಅಮ್ಮ್ ಅದ್ಮೀ ಪಕ್ಷದ ಮೋಹನ್ ದಾಸರಿ ಕುಶಾಲಸ್ವಾಮಿ
ನಂಜಪ್ಪ ಕಾಳೇಗೌಡ ಮಾಳವಿಕಾ
ರಂಗಯ್ಯ ರಾಜಶ್ರೀ ಸಿದ್ದರಾಜು ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *